ಕರ್ನಾಟಕ

karnataka

ETV Bharat / city

ರೈಲು ಇಂಜಿನ್​ನಲ್ಲಿ ಬೆಂಕಿ... ತಪ್ಪಿದ ದುರಂತ - undefined

ಬೆಂಗಳೂರಿನ ಹೂಡಿ ಬಳಿ ಬಂಗಾರಪೇಟೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರೈಲು

By

Published : Apr 27, 2019, 7:57 PM IST

ಬೆಂಗಳೂರು:ವೈಟ್​ಫೀಲ್ಡ್ ಬಳಿಯ ಹೂಡಿ ಮಾರ್ಗದಲ್ಲಿ ಸಾಗುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಿಗೆ ದಿಗಿಲು ಹುಟ್ಟಿಸಿತು.

ಬಂಗಾರಪೇಟೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಎಚ್ಚೆತ್ತ ಲೋಕೋ ಪೈಲಟ್ ಹೂಡಿ ರೈಲ್ವೆ ಸ್ಟೆಷನ್ ಬಳಿ ರೈಲು ನಿಲ್ಲಿಸಿದರು.

ರೈಲು

ಏನಾಗುವುದೋ ಎಂದು ಪ್ರಯಾಣಿಕರು ಆತಂಕಗೊಂಡಿದ್ದರು. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.ಹಠಾತ್ತನೆ ಸಂಭವಿಸಿದ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ.

For All Latest Updates

TAGGED:

ABOUT THE AUTHOR

...view details