ಬೆಂಗಳೂರು: ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್ ಲಂಚ ತೆಗೆದುಕೊಳ್ಳುವಾಗ ನೇರವಾಗಿ ಆಪ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಪ್ರಕರಣದ ಕುರಿತು ಇಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಜಿಲ್ಲಾ ಆರೋಗ್ಯಾಧಿಕಾರಿ ವಜಾಗೊಳಿಸಬೇಕೆಂದು ಬೈಯಪ್ಪನಹಳ್ಳಿಯ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರು ಧರಣಿ ನಿರತರ ಬಳಿ ಬಂದು ದೂರನ್ನು ಸ್ವೀಕರಿಸಿದ ನಂತರ ಪ್ರತಿಭಟನೆ ಕೈಬಿಡಲಾಯಿತು. ಬೆಂಗಳೂರು ಜಿಲ್ಲಾ ಆರೋಗ್ಯಾಧಿಕಾರಿಗಳ ವ್ಯಾಪಕ ಭ್ರಷ್ಟಾಚಾರಗಳಿಂದಾಗಿ ಬೆಂಗಳೂರು ಜನತೆ ಇಂದು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸಾವು-ನೋವುಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಈ ಕೂಡಲೇ ಅವರನ್ನು ವಜಾಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಯಿತು.