ಬೆಂಗಳೂರು:ಕೊರೊನಾ ಸೋಂಕಿತರಿಗಾಗಿ ಖಾಸಗಿ ಆಸ್ಪತ್ರೆಗಳು ನೀಡಿರುವ ಬೆಡ್ ಸೌಲಭ್ಯ ಸೇರಿದಂತೆ ಅಗತ್ಯ ಚಿಕಿತ್ಸೆಗಳ ಕುರಿತಂತೆ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ತಂಡ ಭೇಟಿ ಮಾಡಿ ತಪಾಸಣೆ ನಡೆಸಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳ ಸ್ಥಿತಿಗತಿ ಕುರಿತಂತೆ ಪರಿಶೀಲಿಸಲು ರಾಜ್ಯ ಸರ್ಕಾರ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಒಳಗೊಂಡ ತಂಡ ರಚನೆ ಮಾಡಿದೆ. ಅಲೋಕ್ ಕುಮಾರ್ ಅವರ ನೇತೃತ್ವದ ತಂಡ ನಗರ ಪೂರ್ವ ವಿಭಾಗದ ಖಾಸಗಿ ಆಸ್ಪತ್ರೆಗಳ ಉಸ್ತುವಾರಿ ವಹಿಸಿದೆ. ಈ ಭಾಗದಲ್ಲಿ ಬರುವ ಮಣಿಪಾಲ್, ಚಿನ್ಮಯ್, ಜನಪ್ರಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಅಂಬೇಡ್ಕರ್ ಮೆಡಿಕಲ್ ಕಾಲೇಜು, ಬ್ಯಾಪಿಸ್ಟ್ ಆಸ್ಪತ್ರೆ ಹಾಗೂ ಸೇಂಟ್ ಫಿಲೋಮಿನಾ ಸೇರಿದಂತೆ ಏಳು ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿತು.