ಕರ್ನಾಟಕ

karnataka

By

Published : Dec 2, 2019, 2:30 PM IST

ETV Bharat / city

ಮತ್ತೆ ಸಿದ್ದರಾಮಯ್ಯ ಸಿಎಂ... ಸಂಚಲನ ಸೃಷ್ಟಿಸಿದ ಎಂಬಿಪಾ ಟ್ವೀಟ್​​

ಈ ತಿಂಗಳ ಅಂತ್ಯದೊಳಗೆ ಭಾಗ್ಯಗಳ ಸರ್ಕಾರ ಮತ್ತೆ ಬರಲಿದೆ. ಸೂಕ್ಷ್ಮವಾಗಿ ಗಮನಿಸಿದರೆ, ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

all-the-signs-of-siddaramaiah-becoming-chief-minister-again
ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ..ಎಂ.ಬಿ.ಪಾಟೀಲ್ ಟ್ವೀಟ್​

ಬೆಂಗಳೂರು:ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಎಂಬ ಸೂಚನೆಯನ್ನು ಮಾಜಿ ಸಚಿವ ಎಂ.ಬಿ.ಪಾಟೀಲ್ ನೀಡಿದ್ದಾರೆ.

ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ..ಎಂ.ಬಿ.ಪಾಟೀಲ್ ಟ್ವೀಟ್​

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈ ತಿಂಗಳ ಅಂತ್ಯದೊಳಗೆ ಭಾಗ್ಯಗಳ ಸರ್ಕಾರ ಮತ್ತೆ ಬರಲಿದೆ. ಇತ್ತೀಚಿಗೆ ಸರ್ಕಾರ ಇದೆಯೋ, ಇಲ್ಲವೋ ಎಂಬಂತಾಗಿದೆ. ಸೂಕ್ಷ್ಮವಾಗಿ ಗಮನಿಸಿದರೆ, ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮೇಲಿಂದ ಮೇಲೆ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂಬ ಹೇಳಿಕೆ ನೀಡುತ್ತಾ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ತರಲಿದ್ದೇವೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ABOUT THE AUTHOR

...view details