ಬೆಂಗಳೂರು:ಸಿಎಎ ವಿರೋಧಿ ಪ್ರತಿಭಟನಾ ಸಮಾವೇಶದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಎತ್ತಿದ ಅಮೂಲ್ಯ ಲಿಯೋನ ಅವರಿಗೆ (ದೇಶದ್ರೋಹದ ಆರೋಪ) ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಜಾಮೀನು ನಿರಾಕರಿಸಿದೆ.
ಜೊತೆಗೆ ಆಕೆಯನ್ನು ಫೆ.23ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಸೂಚಿಸಿದೆ. ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಹಿಂದೂ-ಮುಸ್ಲಿಂ-ಸಿಖ್-ಇಸಾಯಿ ಒಕ್ಕೂಟ ಹಾಗೂ ಟಿಪ್ಪು ಸುಲ್ತಾನ್ ಸಂಘಟನೆ ಫ್ರೀಡಂಪಾರ್ಕ್ನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಅಮೂಲ್ಯ , ಪಾಕ್ ಪರ ಘೋಷಣೆ ಕೂಗಿದ್ದರು.