ಬೆಂಗಳೂರು: ನನಗೆ ಸಚಿವ ಸ್ಥಾನ ಬೇಕೇ ಬೇಕು ಎಂದು ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸಿಎಂ, ರಾಜ್ಯಾಧ್ಯಕ್ಷರಿಗೂ ನಾನು ಮನವಿ ಮಾಡಿದ್ದೇನೆ. ಮೂರು ಬಾರಿ ನಾನು ಶಾಸಕನಾಗಿದ್ದೇನೆ. ಕ್ಷೇತ್ರ, ರಾಜ್ಯದ ಕೆಲಸ ಮಾಡಲು ಅವಕಾಶ ಕೊಡಬೇಕು ಎಂದು ಮಾಮನಿ ಒತ್ತಾಯಿಸಿದ್ದಾರೆ.
ಸಿಎಂ, ರಾಜ್ಯಾಧ್ಯಕ್ಷರು, ಸಂಘದ ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಸಂಪುಟ ವಿಸ್ತರಣೆಯನ್ನಾದ್ರೂ ಮಾಡಲಿ, ಪುನರ್ರಚನೆಯನ್ನಾದ್ರೂ ಮಾಡಲಿ, ನನಗೆ ಸಚಿವ ಸ್ಥಾನ ಬೇಕು. ಕೇವಲ ಕ್ಷೇತ್ರದ ಅಭಿವೃದ್ಧಿಗೆ ಅಂತ ಕೇಳ್ತಿಲ್ಲ. ಕ್ಷೇತ್ರದ ಜೊತೆ ರಾಜ್ಯದ ಕೆಲಸ ಮಾಡುತ್ತೇನೆ ಎಂದರು.