ಕರ್ನಾಟಕ

karnataka

ETV Bharat / city

ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ: ಚಾಲಕ ಸಾವು - ಲಾರಿ ಅಪಘಾತದಲ್ಲಿ ಚಾಲಕ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಮುದುಗುರ್ಕಿ ಬಳಿ‌, ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಲಾರಿ ಚಾಲಕ ಸಾವನ್ನಪ್ಪಿದ್ದಾನೆ.

ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ

By

Published : Aug 6, 2019, 7:33 PM IST

ಬೆಂಗಳೂರು:ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಮುದುಗುರ್ಕಿ ಬಳಿ‌ ನಡೆದಿದೆ. ತೆಲಂಗಾಣ ಮೂಲದ ರಿಯಾಜ್ (40) ಮೃತ ಲಾರಿ ಚಾಲಕ.

ಮುದುಗುರ್ಕಿ ಬಳಿ‌ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ

ಚಿಕ್ಕಬಳ್ಳಾಪುರ ಕಡೆಯಿಂದ ಬೆಂಗಳೂರು ಕಡೆಗೆ ವೇಗವಾಗಿ ಲಾರಿ ಬರುತ್ತಿತ್ತು. ಈ ವೇಳೆ ಮುದುಗುರ್ಕಿ ಬಳಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಲಾರಿ ರಸ್ತೆಯ ಡಿವೈಡರ್ ದಾಟಿಕೊಂಡು ಹೋಗಿದೆ. ಈ ವೇಳೆ ಲಾರಿ ಚಲಾಯಿಸುತ್ತಿದ್ದ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.

ಇನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ವಿಜಯಪುರ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details