ಕರ್ನಾಟಕ

karnataka

ETV Bharat / city

ಮನಸ್ಸಿಟ್ಟು ಕೆಲಸ ಮಾಡಿದರೆ ಬಿಜೆಪಿಯಲ್ಲಿ ನಾಯಕನಾಗಿ ಬೆಳೆಯಬಹುದು : ಜಮಾಲ್ ಸಿದ್ದೀಖ್

ಮುಸ್ಲಿಮರು, ಕ್ರಿಶ್ಚಿಯನ್ನರು ಸೇರಿ ಅಲ್ಪಸಂಖ್ಯಾತರ ಮೋರ್ಚಾದ ಕಾರ್ಯಕರ್ತರು ಕೇಂದ್ರ ಸರ್ಕಾರ ಮಾಡಿರುವ ಉತ್ತಮ ಕಾರ್ಯಕ್ರಮಗಳ ಕುರಿತು ತಿಳಿಸಬೇಕು. ರಾಜಕೀಯವಾಗಿ ಸ್ಪರ್ಧಿಸಿ ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸುವ ಅವಕಾಶಗಳನ್ನು ಬಳಸಿಕೊಳ್ಳಬೇಕು..

By

Published : Aug 8, 2021, 7:30 PM IST

ಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆ
ಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆ

ಬೆಂಗಳೂರು :ಮನಸ್ಸಿಟ್ಟು ಕೆಲಸ ಮಾಡುವ ಕಟ್ಟ ಕಡೆಯ ಕಾರ್ಯಕರ್ತನಿಗೂ ಬಿಜೆಪಿಯಲ್ಲಿ ನಾಯಕರಾಗಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗುತ್ತದೆ. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯವಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದೀಖ್ ತಿಳಿಸಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಇಂದು ನಡೆದ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ವಿಕಾಸಕ್ಕಾಗಿ ನಾವು ಶ್ರಮಿಸಬೇಕು. ಸರ್ಕಾರದ ಉತ್ತಮ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಮನವಿ ಮಾಡಿದರು.

ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಿಜೆಪಿ ಗರಿಷ್ಠ ಪ್ರಮಾಣದಲ್ಲಿ ಶ್ರಮಿಸುತ್ತಿದೆ. ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಇತರ ಪಕ್ಷಗಳು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ. ಕೇವಲ ಕೌಟುಂಬಿಕ ರಾಜಕಾರಣ ಮಾಡುತ್ತಿವೆ ಎಂದು ಅವರು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೂರದೃಷ್ಟಿಯ ನಾಯಕ ಎಂಬುದನ್ನು ಜಗತ್ತು ಒಪ್ಪಿದೆ. ಭಾರತೀಯ ಜನತಾ ಪಾರ್ಟಿಯು ನರೇಂದ್ರ ಮೋದಿ ಅವರ ಶ್ರೇಷ್ಠ ನಾಯಕತ್ವದಲ್ಲಿ ದೇಶದ ಎಲ್ಲರ ಒಳಿತು ಹಾಗೂ ಅಭಿವೃದ್ಧಿಗೆ ಕಾರ್ಯ ನಿರ್ವಹಿಸುತ್ತಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಚಿಂತನೆಯನ್ನು ಸಾಕಾರಗೊಳಿಸಲು ಅದು ಶ್ರಮಿಸುತ್ತಿದೆ ಎಂದರು.

ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ಸೈಯದ್ ಇಬ್ರಾಹಿಂ ಮಾತನಾಡಿ, ಸ್ವಾವಲಂಬಿ ಸಾಧನೆ ಮತ್ತು ಆತ್ಮನಿರ್ಭರ ಭಾರತದ ಪರಿಕಲ್ಪನೆ ಸಾಕಾರಗೊಳಿಸಲು ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಹಗಲಿರುಳೆನ್ನದೆ ಶ್ರಮಿಸುತ್ತಿದ್ದಾರೆ.

ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಘೋಷಣೆಯೊಂದಿಗೆ ಕೇಂದ್ರ ಸರಕಾರ ಕಾರ್ಯ ನಿರ್ವಹಿಸುತ್ತಿದೆ. ಮುಸ್ಲಿಂ, ಕ್ರಿಶ್ಚಿಯನ್, ಹಿಂದೂಗಳ ನಡುವೆ ಭೇದ ಭಾವ ಇಲ್ಲದೆ ಅದು ಕಾರ್ಯವೆಸಗುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

ಮುಸ್ಲಿಮರು, ಕ್ರಿಶ್ಚಿಯನ್ನರು ಸೇರಿ ಅಲ್ಪಸಂಖ್ಯಾತರ ಮೋರ್ಚಾದ ಕಾರ್ಯಕರ್ತರು ಕೇಂದ್ರ ಸರ್ಕಾರ ಮಾಡಿರುವ ಉತ್ತಮ ಕಾರ್ಯಕ್ರಮಗಳ ಕುರಿತು ತಿಳಿಸಬೇಕು. ರಾಜಕೀಯವಾಗಿ ಸ್ಪರ್ಧಿಸಿ ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸುವ ಅವಕಾಶಗಳನ್ನು ಬಳಸಿಕೊಳ್ಳಬೇಕು.

ರಾಷ್ಟ್ರಪತಿಗಳಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರು ದೇಶಭಕ್ತರಾಗಿದ್ದರು. ದೇಶದ ಪ್ರಗತಿಗಾಗಿ ಅವರು ತಮ್ಮನ್ನು ತೊಡಗಿಸಿಕೊಂಡಿದ್ದರು. ಉತ್ತಮವಾಗಿ ಕೆಲಸ ಮಾಡುವುದಾದರೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನು ಪಕ್ಷ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.


ಇದನ್ನು ಓದಿ: ಲಿಂಗಾಯಿತರು ಅಧಿಕವಾಗಿರುವುದರಿಂದ ಸಂಪುಟದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ : ಶಂಕರ್ ಬಿದರಿ

ABOUT THE AUTHOR

...view details