ಕರ್ನಾಟಕ

karnataka

ಉಪ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ

By

Published : Mar 18, 2021, 1:04 PM IST

ಉಪ ಚುನಾವಣೆ ಸಂಬಂಧ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮಾರ್ಚ್​ 19ಕ್ಕೆ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.

Arun Singh
Arun Singh

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮಾರ್ಚ್ 19ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.

ಮಾರ್ಚ್ 19 ರಂದು ಸಂಜೆ 6 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಕುಮಾರ ಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾರ್ಚ್ 20 ರಂದು ಬೆಳಿಗ್ಗೆ 8.30 ಕ್ಕೆ ಮಲ್ಲೇಶ್ವರಂನಲ್ಲಿರುವ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಉಪ ಚುನಾವಣೆ ಸಂಬಂಧ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿದ್ದು, ಮಧ್ಯಾಹ್ನ ಉದಯಪುರಕ್ಕೆ ತೆರಳಲಿದ್ದಾರೆ.

ABOUT THE AUTHOR

...view details