ಕರ್ನಾಟಕ

karnataka

By

Published : Jun 3, 2022, 7:00 AM IST

ETV Bharat / city

ಜೂನ್‌ 6ರೊಳಗೆ ಬೆಂಗಳೂರು ನಗರದ ರಸ್ತೆಗಳು ಗುಂಡಿ ಮುಕ್ತ : ಬಿಬಿಎಂಪಿ ಮುಖ್ಯ ಆಯುಕ್ತ

ಬೆಂಗಳೂರು ನಗರದ ರಸ್ತೆಗಳನ್ನು ಜೂನ್‌ 6ರೊಳಗೆ ಗುಂಡಿ ಮುಕ್ತ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು..

BBMP Commissioner Tushar Girinath
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು :ಹೈಕೋರ್ಟ್​ ಚಾಟಿ ಬೀಸಿದ್ದರಿಂದ ಎಚ್ಚೆತ್ತುಕೊಂಡ ಬಿಬಿಎಂಪಿ ಜೂನ್ 6ರೊಳಗೆ ನಗರದ ರಸ್ತೆಗಳ ಗುಂಡಿ ಮುಚ್ಚುತ್ತೇವೆ ಎಂದು ಡೆಡ್‌ಲೈನ್ ಘೋಷಿಸಿದೆ. ಪಾಲಿಕೆ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​​, ನಗರದ ಎಲ್ಲಾ ರಸ್ತೆಗಳ ಗುಂಡಿ ಮುಚ್ಚುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ ಕಳೆದ ಒಂದು ವಾರದಿಂದ ಸುಮಾರು 5 ಸಾವಿರ ಗುಂಡಿ ಮುಚ್ಚಿದ್ದೇವೆ ಎಂದು ಅವರು ಇದೇ ವೇಳೆ ತಿಳಿಸಿದರು.

ಫೈಥಾನ್ ಯಂತ್ರದ ಸಹಾಯ :ನಗರದಲ್ಲಿ 50 ಪರ್ಸೆಂಟ್ ಗುಂಡಿಗಳನ್ನು ಮುಚ್ಚಿದ್ದೇವೆ. ಉಳಿದ ಗುಂಡಿಗಳನ್ನು ಫೈಥಾನ್ ಯಂತ್ರದ ಸಹಾಯದಿಂದ ನಗರದ ಹಲವು ಭಾಗಗಳಲ್ಲಿ ಗುಂಡಿ ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಮಳೆ ಬರುತ್ತಿರುವ ಹಿನ್ನೆಲೆ ಸ್ವಲ್ಪ ತಡವಾಗುತ್ತಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ:ಒಂದೇ ದಿನ 5 ಸಾವಿರ ಗುಂಡಿಗಳನ್ನು ಮುಚ್ಚಿದ ಪಾಲಿಕೆ

ABOUT THE AUTHOR

...view details