ಬೆಂಗಳೂರು :ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಶೀಘ್ರ ಗುಣಮುಖರಾಗಿ ಸೇವೆಗೆ ಮರಳುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿ ಇತರ ಬಿಜೆಪಿ ನಾಯಕರು ಟ್ವೀಟ್ ಮೂಲಕ ಹಾರೈಸಿದ್ದಾರೆ.
ಸಚಿವ ಸುರೇಶ್ ಅಂಗಡಿಗೆ ಕೊರೊನಾ.. ಶೀಘ್ರ ಚೇತರಿಕೆಗೆ ಸಿಎಂ ಇತರ ನಾಯಕರ ಹಾರೈಕೆ - suresh angadi suffering from corona
ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮತ್ತೆ ತಮ್ಮ ಕರ್ತವ್ಯಕ್ಕೆ ವಾಪಸ್ ಆಗಲಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ..
![ಸಚಿವ ಸುರೇಶ್ ಅಂಗಡಿಗೆ ಕೊರೊನಾ.. ಶೀಘ್ರ ಚೇತರಿಕೆಗೆ ಸಿಎಂ ಇತರ ನಾಯಕರ ಹಾರೈಕೆ BSY Tweet on suresh angadi](https://etvbharatimages.akamaized.net/etvbharat/prod-images/768-512-8768603-504-8768603-1599840044196.jpg)
ಸಿಎಂ ಬಿಎಸ್ವೈ ಟ್ವೀಟ್
ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮತ್ತೆ ತಮ್ಮ ಕರ್ತವ್ಯಕ್ಕೆ ವಾಪಸ್ ಆಗಲಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.
ಗುರು ದತ್ತಾತ್ರೇಯ ಸ್ವಾಮಿ ಆಶೀರ್ವಾದ ತಮ್ಮ ಮೇಲೆ ಇರಲಿ ಎಂದು ಪ್ರವಾಸೋದ್ಯಮ ಸಚಿವ ಸಿ ಟಿ ರವಿ ಟ್ವೀಟ್ ಮೂಲಕ ಹಾರೈಸಿದ್ದಾರೆ. ಕೇಂದ್ರ ಸಚಿವ ಸುರೇಶ್ ಅಂಗಡಿಯವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕೂಡ ಟ್ವೀಟ್ ಮಾಡಿದ್ದಾರೆ.