ಕರ್ನಾಟಕ

karnataka

By

Published : Jan 9, 2020, 5:12 PM IST

ETV Bharat / city

ಮೊಮ್ಮಗನನ್ನು ಶಾಲೆಯಿಂದ ಕರೆತರುವ ವೇಳೆ ಮಹಿಳೆಯ ಸರ ಎಗರಿಸಿದ ಖದೀಮ!

ಒಂಟಿ‌ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಸರಗಳ್ಳತನ ಮಾಡುತ್ತಿರುವ ಪ್ರಕರಣಗಳು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

Chain snatching in bangalore
ಮಹಿಳೆಯ ಸರಗಳ್ಳತನ ಮಾಡಿದ ಖದೀಮ

ಬೆಂಗಳೂರು: ಒಂಟಿ‌ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಸರಗಳ್ಳತನ ಮಾಡುತ್ತಿರುವ ಪ್ರಕರಣಗಳು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಚಿನ್ನದ ಸರ ಕಳೆದುಕೊಂಡ ಮಹಿಳೆಯ ಅಳಲು

ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಿಡ್ಡಪ್ಪನ ಹಳ್ಳಿಯಲ್ಲಿ ಅಜ್ಜಿಯೊಬ್ಬರು ಮೊಮ್ಮಗನನ್ನು ಶಾಲೆಯಿಂದ ಮನೆಗೆ ಕರೆದೊಯ್ಯುವಾಗ ಬೈಕ್​ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ಖದೀಮನೋರ್ವ ನೋಡು‌ ನೋಡುತ್ತಿದ್ದಂತೆ ಸರ ಕಸಿಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಕೂಗಾಡಿದ್ದಾರೆ. ಆದ್ರೆ ಸರ ಕಸಿದುಕೊಳ್ಳುವ‌ ಭರದಲ್ಲಿ ಆಕೆಯ ಮೇಲೆ ಹಲ್ಲೆ‌ ಮಾಡಿ,‌ ಕೊರಳಿನಲ್ಲಿದ್ದ 40 ಗ್ರಾಂ. ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದಾನೆ.

ಆರ್.ಟಿ ನಗರ‌ ಪೊಲೀಸ್ ಠಾಣೆಯಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿದೆ.

ABOUT THE AUTHOR

...view details