ಕರ್ನಾಟಕ

karnataka

ಗೌಡರ ಕುಟುಂಬ ಶೀಘ್ರವೇ ಕೊರೊನಾದಿಂದ ಗುಣಮುಖವಾಗಲಿ: ಸಿಎಂ, ಡಿಸಿಎಂ ಟ್ವೀಟ್

By

Published : Mar 31, 2021, 1:59 PM IST

Updated : Mar 31, 2021, 4:27 PM IST

ಮಾಜಿ ಪ್ರಧಾನಿ ಹೆಚ್.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರು ಕೊರೊನಾ ಸೋಂಕಿನಿಂದ ಶೀಘ್ರವೇ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಡಿಸಿಎಂ ಅಶ್ವತ್ಥನಾರಾಯಣ್ ಟ್ವೀಟ್ ಮಾಡಿದ್ದಾರೆ.

Farmer PM hd Devegowda Test Cavid Positive
ಗೌಡರ ಕುಟುಂಬ ಶೀಘ್ರವೇ ಕೊರೊನಾದಿಂದ ಗುಣಮುಖರಾಗಲಿ: ಸಿಎಂ, ಡಿಸಿಎಂ ಟ್ವೀಟ್

ಬೆಂಗಳೂರು:ಮಾಜಿ ಪ್ರಧಾನಿ ಹೆಚ್.ದೇವೇಗೌಡ ಕುಟುಂಬ ಕೊರೊನಾ ಸೋಂಕಿನಿಂದ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಹಾರೈಸಿದ್ದಾರೆ.

ಹಿರಿಯ ರಾಜಕಾರಣಿಗಳು ಹಾಗೂ ಮಾಜಿ ಪ್ರಧಾನಮಂತ್ರಿ ದೇವೇಗೌಡರು ಮತ್ತು ಅವರ ಶ್ರೀಮತಿ ಚೆನ್ನಮ್ಮನವರು ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲಿ, ಶೀಘ್ರದಲ್ಲಿ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ, ಹಿರಿಯರಾದ‌ ದೇವೇಗೌಡ ಮತ್ತು ಅವರ ಧರ್ಮಪತ್ನಿ ಚೆನ್ನಮ್ಮ ಅವರು ಬಹುಬೇಗ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬರಲಿ ಎಂದು ಆಶಿಸುತ್ತೇನೆ. ನಾಡಿನ ಜನತೆಯ ಪ್ರಾರ್ಥನೆ ನಿಮ್ಮೊಂದಿಗಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ್ ಟ್ವೀಟ್ ಮಾಡಿದ್ದಾರೆ.

ತಾತ ಬೇಗ ಹುಷಾರಾಗುತ್ತಾರೆ:

ಮಾಜಿ ಪ್ರಧಾನಮಂತ್ರಿಗಳು ಮತ್ತು ನನ್ನ ಪ್ರೀತಿಯ ತಾತಾ ಹೆಚ್.ಡಿ. ದೇವೇಗೌಡರಿಗೆ ಹಾಗೂ ಅಜ್ಜಿ ಚೆನ್ನಮ್ಮ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಹಿಂದಿರುಗಲಿದ್ದಾರೆ ಎಂದು ಮೊಮ್ಮಗ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳಲ್ಲಿ ಯಾವುದೇ ಆತಂಕ ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.

Last Updated : Mar 31, 2021, 4:27 PM IST

ABOUT THE AUTHOR

...view details