ಬೆಂಗಳೂರು:ಮಾಜಿ ಪ್ರಧಾನಿ ಹೆಚ್.ದೇವೇಗೌಡ ಕುಟುಂಬ ಕೊರೊನಾ ಸೋಂಕಿನಿಂದ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಹಾರೈಸಿದ್ದಾರೆ.
ಹಿರಿಯ ರಾಜಕಾರಣಿಗಳು ಹಾಗೂ ಮಾಜಿ ಪ್ರಧಾನಮಂತ್ರಿ ದೇವೇಗೌಡರು ಮತ್ತು ಅವರ ಶ್ರೀಮತಿ ಚೆನ್ನಮ್ಮನವರು ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲಿ, ಶೀಘ್ರದಲ್ಲಿ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಮಾಜಿ ಪ್ರಧಾನಿ, ಹಿರಿಯರಾದ ದೇವೇಗೌಡ ಮತ್ತು ಅವರ ಧರ್ಮಪತ್ನಿ ಚೆನ್ನಮ್ಮ ಅವರು ಬಹುಬೇಗ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬರಲಿ ಎಂದು ಆಶಿಸುತ್ತೇನೆ. ನಾಡಿನ ಜನತೆಯ ಪ್ರಾರ್ಥನೆ ನಿಮ್ಮೊಂದಿಗಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ್ ಟ್ವೀಟ್ ಮಾಡಿದ್ದಾರೆ.