ಕರ್ನಾಟಕ

karnataka

ETV Bharat / city

ಐಎಂಎ ವಂಚನೆ ಪ್ರಕರಣ: ಮನ್ಸೂರ್​ ಖಾನ್​ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿ ಖಾನ್​ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಸಿಟಿ ಸಿವಿಲ್​ ಕೋರ್ಟ್​ ಆದೇಶ ಹೊರಡಿಸಿದೆ.

By

Published : Aug 1, 2019, 9:13 PM IST

ಮನ್ಸೂರ್ ಖಾನ್

ಬೆಂಗಳೂರು; ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿ ಖಾನ್​ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಸಿಟಿ ಸಿವಿಲ್​ ಕೋರ್ಟ್​ ಆದೇಶ ಹೊರಡಿಸಿದೆ.

ಮನ್ಸೂರ್ ಖಾನ್​ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

10 ದಿನಗಳಿಂದ ಜಾರಿ ನಿರ್ದೆಶನಾಲಯದ ಆಧಿಕಾರಿಗಳು ಮನ್ಸೂರ್ ಅಲಿ ಖಾನ್​ನನ್ನು ವಿಚಾರಣೆ ನಡೆಸಿದ್ದರು. ಬೆಂಗಳೂರು ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹ ಸಿಟಿ ಸಿವಿಲ್ ಕೋರ್ಟ್​ನಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡುವಂತೆ ಆದೇಶಿಸಲಾಗಿದೆ. ಮನ್ಸೂರ್​ನನ್ನು ಬಿಗಿ ಪೊಲೀಸ್​ ಭದ್ರತೆ ನಡುವೆ ಇಡಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆತಂದರು. ಇಡಿ ಅಧಿಕಾರಿಗಳ ಮುಂದೆ ಕುತೂಹಲಕಾರಿ ಹೇಳಿಕೆ ನೀಡಿರುವ ಹಿನ್ನೆಲೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

ABOUT THE AUTHOR

...view details