ಕರ್ನಾಟಕ

karnataka

ಚಿತ್ರೀಕರಣಕ್ಕೆ ಅನುಮತಿ ಪಡೆಯುವ ನಿಯಮಗಳಲ್ಲಿ ಬದಲಾವಣೆ ತರುತ್ತೇವೆ: ಸಿಎಂ ಬೊಮ್ಮಾಯಿ

By

Published : Aug 10, 2021, 11:30 AM IST

Updated : Aug 10, 2021, 2:30 PM IST

ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ನಾಳೆ ಅಥವಾ ನಾಡಿದ್ದು ಹೊಸ ಆದೇಶಗಳನ್ನು ಮಾಡುತ್ತೇವೆ. ನಿಯಮಗಳಲ್ಲಿ ಬದಲಾವಣೆ ತರುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.

cm-basavaraj-bommai-on-film-shooting
ಚಿತ್ರೀಕರಣಕ್ಕೆ ಅನುಮತಿ ಪಡೆಯುವ ನಿಯಮಗಳಲ್ಲಿ ಬದಲಾವಣೆ ತರುತ್ತೇವೆ: ಸಿಎಂ

ಬೆಂಗಳೂರು: ಸಿನಿಮಾ ಶೂಟಿಂಗ್ ವೇಳೆ ಸಾಹಸ ಕಲಾವಿದ ವಿವೇಕ್ ದುರ್ಮರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಪಡೆಯುವ ನಿಯಮಗಳಲ್ಲಿ ಬದಲಾವಣೆ ತರುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಆರ್‌.ಟಿ.ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಚಿತ್ರೀಕರಣದ ನಿಯಮಗಳನ್ನು ಕೆಲವರು ಅನುಸರಿಸುತ್ತಿಲ್ಲ. ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ನಾಳೆ ಅಥವಾ ನಾಡಿದ್ದು ಹೊಸ ಆದೇಶಗಳನ್ನು ಮಾಡುತ್ತೇವೆ. ನಿಯಮಗಳಲ್ಲಿ ಬದಲಾವಣೆ ತರುತ್ತೇವೆ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ

ಜೊತೆಗೆ ವಿಧಾನಸೌಧದಲ್ಲಿ ಇಂದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಮಾಡ್ತಿದ್ದೇನೆ. ಸಂಜೆ ಬೆಂಗಳೂರಿನ ಎಲ್ಲಾ‌ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದೇನೆ. ಸಭೆಯಲ್ಲಿ ಬೆಂಗಳೂರು ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ:2024ರ ವೇಳೆಗೆ ಪ್ರತಿ 1,000 ಜನಸಂಖ್ಯೆಗೆ ಓರ್ವ ವೈದ್ಯ: ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್​

Last Updated : Aug 10, 2021, 2:30 PM IST

ABOUT THE AUTHOR

...view details