ಕರ್ನಾಟಕ

karnataka

By

Published : Apr 26, 2022, 8:05 AM IST

ETV Bharat / city

ಇಂದು ಬೆಂಗಳೂರಿನಿಂದ ವಿಜಯಪುರಕ್ಕೆ ಹಾರಲಿರುವ ಸಿಎಂ.. ವಿವಿಧ ಯೋಜನೆಗಳಿಗೆ ಚಾಲನೆ, ದೇವಸ್ಥಾನಕ್ಕೆ ಭೇಟಿ

ಸಿಎಂ ಬೊಮ್ಮಾಯಿ ಅವರಿಂದ ಜಿಲ್ಲಾ ಪ್ರವಾಸ ಮುಂದುವರೆದಿದ್ದು, ಇಂದು ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

Continued District Tour from CM Bommai  CM Bommai Visit to Vijayapur district today  CM Bommai news  ಸಿಎಂ ಬೊಮ್ಮಾಯಿಯಿಂದ ಮುಂದುವರಿದ ಜಿಲ್ಲಾ ಪ್ರವಾಸ  ಇಂದು ವಿಜಯಪುರ ಜಿಲ್ಲೆಗೆ ಸಿಎಂ ಬೊಮ್ಮಾಯಿ ಭೇಟಿ  ಸಿಎಂ ಬೊಮ್ಮಾಯಿ ಸುದ್ದಿ
ವಿವಿಧ ಯೋಜನೆಗಳಿಗೆ ಚಾಲನೆ, ದೇವಸ್ಥಾನಕ್ಕೆ ಭೇಟಿ

ಬೆಂಗಳೂರು :ಕಳೆದ ಎರಡು ವಾರಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರಂತರವಾಗಿ ಜಿಲ್ಲಾ ಪ್ರವಾಸದಲ್ಲಿ ತೊಡಗಿದ್ದು, ಇಂದು ಮತ್ತು ನಾಳೆ ಎರಡು ದಿನ ವಿಜಯಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಇಂದು ಬೆಳಗ್ಗೆ 11.30ಕ್ಕೆ ವಿಜಯಪುರದ ದೇವರ ಹಿಪ್ಪರಗಿಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ ಬೂದಿಹಾಳ - ಪೀರಾಪುರ ಏತ ನೀರಾವರಿ ಯೋಜನೆಗೆ ಚಾಲನೆ ಕೊಡಲಿದ್ದಾರೆ. ನಂತರ ಮಧ್ಯಾಹ್ನ 2.30ಕ್ಕೆ ತಾಳಿಕೋಟಿಯ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಇಂದು ಸಂಜೆ ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ.

ಓದಿ:ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಅಂಬೇಡ್ಕರ್ ಪುತ್ಥಳಿ ಅನಾವರಣ

ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಗೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ, ಅಲ್ಲಿ ಅನ್ನದಾಸೋಹ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಜೈನ್ ಬಸದಿಗೆ ಭೇಟಿ ಕೊಡಲಿದ್ದು, ಮಧ್ಯಾಹ್ನ 1ಗಂಟೆಗೆ ಮೂಡಿಬಿದರೆ ಪ್ರೆಸ್ ಕ್ಲಬ್​ನಲ್ಲಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮೂಡಬಿದಿರೆ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ಮುಲ್ಕಿ ವಿಧಾನಸಭೆ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ 5.30ಕ್ಕೆ ಮೂಡುಬಿದರೆಯಿಂದ ಹೊರಟು ರಾತ್ರಿ 7.45ಕ್ಕೆ ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ.

ಮೂಡಬಿದಿರೆಯಿಂದಲೇ ಪಿಎಂ ವೀಡಿಯೋ ಕಾನ್ಫ್‌ರೆನ್ಸ್​ನಲ್ಲಿ ಭಾಗಿ : ಮೂಡಬಿದಿರೆಯಿಂದಲೇ ಪ್ರಧಾನಿ ನರೇಂದ್ರ ಮೋದಿ ನಡೆಸಲಿರುವ ವಿಡಿಯೋ ಕಾನ್ಫ್‌ರೆನ್ಸ್​ನಲ್ಲಿ ಭಾಗಿಯಾಗಲಿರುವ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ಕೊವೀಡ್ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ನಾಲ್ಕನೇ ಅಲೆ ನಿಯಂತ್ರಣ ಬಗ್ಗೆ ಮುಂಜಾಗ್ರತಾ ಕ್ರಮಗಳ ಕುರಿತು ಪಿಎಂ ಜೊತೆ ಸಮಾಲೋಚನೆ ನಡೆಸಲಿದ್ದಾರೆ.

ABOUT THE AUTHOR

...view details