ಕರ್ನಾಟಕ

karnataka

By

Published : Aug 3, 2020, 7:52 PM IST

ETV Bharat / city

ಸಿಎಂ ಬಿಎಸ್​​ವೈ ಆರೋಗ್ಯ ಸ್ಥಿರ: ಪ್ರೋಟೊಕಾಲ್ ಪ್ರಕಾರ ಚಿಕಿತ್ಸೆ

ಕೊರೊನಾ ಸೋಂಕಿಗೆ ಗುರಿಯಾಗಿರುವ ಸಿಎಂ ಬಿ. ಎಸ್​. ಯಡಿಯೂರಪ್ಪ ಅವರಿಗೆ ಪ್ರೊಟೊಕಾಲ್ ಪ್ರಕಾರ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

cm-bs-yadiyurappa-infected-from-corona
ಮಣಿಪಾಲ್ ಆಸ್ಪತ್ರೆ

ಬೆಂಗಳೂರು: ರಾಜ್ಯದ ಸಚಿವರುಗಳ ನಂತರ ಇದೀಗ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೂ ಕೊರೊನಾ ದೃಢಪಟ್ಟಿದೆ.

ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆ ಭಾನುವಾರ ರಾತ್ರಿ 11 ಗಂಟೆಗೆ ಮಣಿಪಾಲ್ ಆಸ್ಪತ್ರೆಗೆ ಅವರು ದಾಖಲಾದರು. ಸಿಎಂ ಪುತ್ರಿಗೂ ಸೋಂಕು ತಗುಲಿದ್ದು, ಚಿಕಿತ್ಸೆ ಮುಂದುವರೆದಿದೆ.

ಸದ್ಯ ಬಿಎಸ್​​ವೈ ಅವರಿಗೆ ಕೊರೊನಾ ರೋಗ ಲಕ್ಷಣದ ತೀವ್ರತೆ ಕಡಿಮೆ ಇದ್ದು, ಆರೋಗ್ಯ ಉತ್ತಮವಾಗಿದೆ. ಪ್ರೋಟೊಕಾಲ್ ಪ್ರಕಾರ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಸದ್ಯ ಮಲ್ಟಿ ಡಿಸಿಪ್ಲಿನರಿ ವೈದ್ಯರ ತಂಡ ಸಿಎಂ ಆರೋಗ್ಯದ ಮೇಲೆ ನಿಗಾವಹಿಸಿದ್ದು, ಚಿಕಿತ್ಸೆ ಮುಂದುವರಿಸಿದ್ದಾರೆ.

ABOUT THE AUTHOR

...view details