ಕರ್ನಾಟಕ

karnataka

By

Published : Mar 21, 2020, 7:51 PM IST

ETV Bharat / city

'ಜನತಾ ಕರ್ಫ್ಯೂ' ಬೆಂಬಲಿಸಲು ಸಿಎಂ ಬಿಎಸ್​​ವೈ ಮನವಿ

ಬೆಳಿಗ್ಗೆಯಿಂದ ರಾತ್ರಿ 9ರವರೆಗೂ ಯಾರೂ ಮನೆಯಿಂದ ಹೊರಬಾರದು. ಆಗ ಕರ್ಫ್ಯೂಗೆ ಒಂದು ಅರ್ಥ ಬರುತ್ತದೆ. ಹಾಗೂ ಸಾರ್ಥಕವಾಗಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

cm-call-to-support-for-janata-curfew
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ

ಬೆಂಗಳೂರು: ಕೋವಿಡ್-19 ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಕರೆ ನೀಡಿರುವ 'ಜನತಾ ಕರ್ಫ್ಯೂ' ಬೆಂಬಲಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, 'ನಾಳೆ ಬೆಳಗ್ಗೆ 7ರಿಂದ ರಾತ್ರಿ 9 ಗಂಟೆವರೆಗೆ ಜನತಾ ಕರ್ಫ್ಯೂ ಆಚರಣೆಗೆ ನಿಮ್ಮೆಲ್ಲರ ಬೆಂಬಲ ಅತಿ ಅಗತ್ಯ. ಈ ಸಮಯದಲ್ಲಿ ನಾವೆಲ್ಲರೂ ಮನೆಯಲ್ಲಿ ಉಳಿದು ಕರ್ಫ್ಯೂಗೆ ಬೆಂಬಲಿಸೋಣ. ಇದೆಲ್ಲದಕ್ಕೂ ರಾಜ್ಯದ 6.5 ಕೋಟಿ ಜನರ ನೈತಿಕ ಮತ್ತು ಸಾಂಘಿಕ ಬೆಂಬಲ ಮುಖ್ಯ ಎಂದು ಹೇಳಿದ್ದಾರೆ.

ಈ ಸಮಯದಲ್ಲಿ ನನ್ನ ಕಳಕಳಿ ಏನೆಂದರೆ ರಾತ್ರಿ 9 ಗಂಟೆಯ ನಂತರ ಕರ್ಫ್ಯೂ ಅವಧಿ ಮುಗಿದಿದೆ ಎಂದು ಎಲ್ಲರೂ ಮನೆಯ ಹೊರ ಬಂದು ಸಂಭ್ರಮಿಸುವುದಾಗಲಿ ಅಥವಾ ನಿಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ತೊಡಗಿಸುವುದಾಗಲಿ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.

ಸಂಜೆ 5 ಗಂಟೆಗೆ ಮನೆಯ ಕಿಟಕಿಗಳಿಂದ ಮತ್ತು ಛಾವಣಿಗಳ ಮೇಲಿಂದ ಚಪ್ಪಾಳೆ ತಟ್ಟಿ ವೈದ್ಯರಿಗೆ ಮತ್ತು ಪೊಲೀಸರಿಗೆ ನೈತಿಕ ಬೆಂಬಲ ನೀಡುವುದನ್ನು ಮಾತ್ರ ಮರೆಯಬೇಡಿ ಎಂದು ಕೋರಿದ್ದಾರೆ.

ABOUT THE AUTHOR

...view details