ಕರ್ನಾಟಕ

karnataka

By

Published : Dec 19, 2019, 1:55 PM IST

ETV Bharat / city

'ಪೌರತ್ವ' ಪ್ರತಿಭಟನೆ: ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದ ಸಿಎಂ

ರಾಜ್ಯದೆಲ್ಲೆಡೆ ಪೌರತ್ವ ಕಿಚ್ಚು ಹೆಚ್ಚುತ್ತಿದ್ದು, ಈ ಸಂಬಂಧ ಕ್ಷಣಕ್ಷಣದ ಮಾಹಿತಿ ಪಡೆಯುತ್ತಿರುವ ಸಿಎಂ ಯಡಿಯೂರಪ್ಪ ಗುಪ್ತಚರ ಇಲಾಖೆ ಅಧಿಕಾರಿಗಳನ್ನು ಕರೆಸಿಕೊಂಡು ಮಾಹಿತಿ ಪಡೆದುಕೊಂಡರು.

CM receives information from the Intelligence Department
ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದ ಸಿಎಂ

ಬೆಂಗಳೂರು:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದೆಲ್ಲೆಡೆ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಬಂಧ ಗುಪ್ತಚರ ಇಲಾಖೆ ಅಧಿಕಾರಿಗಳನ್ನು ಕರೆಸಿಕೊಂಡು ಸಿಎಂ ಮಾಹಿತಿ ಪಡೆದುಕೊಂಡರು.

ರಾಜ್ಯದೆಲ್ಲೆಡೆ ನಡೆಯುತ್ತಿರುವ ಪ್ರತಿಭಟನೆ ಸಂಬಂಧ ಕ್ಷಣಕ್ಷಣದ ಮಾಹಿತಿ ಪಡೆಯುತ್ತಿರುವ ಸಿಎಂ ಯಡಿಯೂರಪ್ಪ, ಡಿಜಿಪಿ ನೀಲಮಣಿ ರಾಜುರಿಂದ ದೂರವಾಣಿಯಲ್ಲಿ ಮಾಹಿತಿ ಪಡೆದಿದ್ದಾರೆ.

ಸಿಎಂ ಭೇಟಿಯಾದ ಎಡಿಜಿಪಿ ಕಮಲ್ ಪಂಥ್

ಸಿಎಂ ಸೂಚನೆ ಮೇರೆಗೆ ಗುಪ್ತಚರ ಇಲಾಖೆ ಎಡಿಜಿಪಿ ಕಮಲ್ ಪಂಥ್, ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದರು. ಖುದ್ದು ಸಿಎಂ ಬಿಎಸ್​ವೈ ಭೇಟಿಯಾಗಿ ಗುಪ್ತಚರ ಇಲಾಖೆ ಕಲೆಹಾಕಿರುವ ಮಾಹಿತಿಯನ್ನು ಸಿಎಂಗೆ ವಿವರಿಸಿದರು. ಮಾಧ್ಯಮಗಳ ಜೊತೆ ಸಿಎಂ ಮಾತನಾಡುವ ಮುನ್ನ ಕಮಲ್ ಪಂಥ್​ರಿಂದ ಸಿಎಂ ಸಮಗ್ರ ಮಾಹಿತಿ ಪಡೆದುಕೊಂಡರು.

For All Latest Updates

ABOUT THE AUTHOR

...view details