ಕರ್ನಾಟಕ

karnataka

ಲಾಕ್​ಡೌನ್ ವಿಸ್ತರಣೆ ಮಾಡಿದ್ರೆ ಆರ್ಥಿಕ ಚಟುವಟಿಕೆಗೆ ಏನಪ್ಪಾ ಮಾಡೋದು?: ಬಿಎಸ್​ವೈ

By

Published : Jun 10, 2021, 1:26 PM IST

ಲಾಕ್​ಡೌನ್ ಮುಂದುವರೆಸುತ್ತಾ ಹೋದರೆ ಆರ್ಥಿಕ ಚಟುವಟಿಕೆಗೆ ಏನು ಮಾಡುವುದು. ಇದರ ಬದಲು ಹೆಚ್ಚೆಚ್ಚು ಕೊರೊನಾ ಟೆಸ್ಟ್ ಮಾಡಿ. ಕೋವಿಡ್ ನಿಯಂತ್ರಣಕ್ಕೆ ಲಾಕ್​ಡೌನ್ ಹೊರತುಪಡಿಸಿ, ಇತರ ಎಲ್ಲ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಸೂಚಿಸಿದ್ದಾರೆ.

Bangalore
ಜಿಲ್ಲಾಡಳಿತಗಳೊಂದಿಗೆ ಸಿಎಂ ಯಡಿಯೂರಪ್ಪ ವೀಡಿಯೋ ಸಂವಾದ

ಬೆಂಗಳೂರು:ಗೃಹ ಕಚೇರಿ ಕೃಷ್ಣಾದಲ್ಲಿ ಮೈಸೂರು, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್​ಡೌನ್ ವಿಸ್ತರಣೆ ಮಾಡಬೇಕು ಎನ್ನುವ ಬೇಡಿಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಬಂದಿದ್ದು, ಲಾಕ್​ಡೌನ್ ಮುಂದುವರೆಸುತ್ತಾ ಹೋದರೆ ಆರ್ಥಿಕ ಚಟುವಟಿಕೆಗೆ ಏನಪ್ಪಾ ಮಾಡೋದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

ಬೆಳಗಾವಿ ಉಸ್ತುವಾರಿ ಸಚಿವರಾದ ಡಿಸಿಎಂ ಗೋವಿಂದ ಕಾರಜೋಳ, ಮೈಸೂರು ಉಸ್ತುವಾರಿ ಎಸ್.ಟಿ ಸೋಮಶೇಖರ್, ತುಮಕೂರು ಉಸ್ತುವಾರಿ ಮಾಧುಸ್ವಾಮಿ, ಶಿವಮೊಗ್ಗ ಉಸ್ತುವಾರಿ ಈಶ್ವರಪ್ಪ ಲಾಕ್​ಡೌನ್ ವಿಸ್ತರಣೆ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಕೂಡ ಕೊರೊನಾ ನಿಯಂತ್ರಣಕ್ಕೆ ಮತ್ತೊಂದು ವಾರ ಲಾಕ್​ಡೌನ್ ಮುಂದುವರೆಸುವಂತೆ ಮನವಿ ಮಾಡಿದರು.

ಡಿಸಿಎಂ ಕಾರಜೋಳ ಲಾಕ್​ಡೌನ್ ಮುಂದುವರೆಸುವುದು ಒಳ್ಳೆಯದು ಎಂಬ ಹೇಳಿಕೆ ನೀಡುತ್ತಿದ್ದಂತೆ, ಆರ್ಥಿಕ ಚಟುವಟಿಕೆಗೆ ಏನು ಮಾಡುವುದು. ಲಾಕ್​ಡೌನ್ ಮುಂದುವರೆಸುತ್ತಾ ಹೋದರೆ ಕಷ್ಟವಾಗಲಿದೆ. ಇದರ ಬದಲು ಹೆಚ್ಚೆಚ್ಚು ಕೊರೊನಾ ಟೆಸ್ಟ್ ಮಾಡಿ. ಕೋವಿಡ್ ನಿಯಂತ್ರಣಕ್ಕೆ ಲಾಕ್​ಡೌನ್ ಹೊರತುಪಡಿಸಿ, ಇತರ ಎಲ್ಲ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚನೆ ನೀಡಿದ್ದಾರೆ.

ಈಗಾಗಲೇ ಜೂನ್ 14 ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಲಾಗಿದ್ದು, ಮತ್ತೆ ಲಾಕ್​ಡೌನ್ ವಿಸ್ತರಣೆ ಮಾಡಲು ಸಿಎಂ ಯಡಿಯೂರಪ್ಪಗೆ ಒಲವಿಲ್ಲ ಎನ್ನುವುದು ಇಂದಿನ ಸಭೆಯಲ್ಲಿ ಸ್ಪಷ್ಟವಾಗಿದೆ. ಹೀಗಾಗಿ, ಕಠಿಣ ನಿಯಮದೊಂದಿಗೆ ಅನ್ ಲಾಕ್ ಪ್ರಕ್ರಿಯೆ ಆರಂಭಿಸುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ:ನನ್ನ ಮೇಲೆ ಆರೋಪ ಸಾಬೀತಾಗದಿದ್ದರೆ ಸಿಂಧೂರಿ ರಾಜೀನಾಮೆ ಕೊಡ್ತಾರಾ?: ಸಾ‌.ರಾ ಮಹೇಶ್

ABOUT THE AUTHOR

...view details