ಕರ್ನಾಟಕ

karnataka

ETV Bharat / city

ನಡ್ಡಾ ಭೇಟಿ ವೇಳೆ ಸಿಎಂಗೆ ಪುತ್ರ ವಿಜಯೇಂದ್ರ ಸಾಥ್​.. ಹೆಚ್ಚಿದ ಕುತೂಹಲ - ಜೆ.ಪಿ.ನಡ್ಡಾರನ್ನ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ಜೊತೆ ಅವರ ಪುತ್ರ ವಿಜಯೇಂದ್ರ ಕೂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿದ್ದು, ಹಲವು ಕುತೂಹಲಕ್ಕೆ ಕಾರಣವಾಗಿದೆ.

Cm yediyurappa and Vijayendra meets jp nadda
ಜೆ.ಪಿ.ನಡ್ಡಾರನ್ನ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ

By

Published : Jul 17, 2021, 12:35 PM IST

ಬೆಂಗಳೂರು:ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಈ ವೇಳೆ, ಪಕ್ಷದ ರಾಜ್ಯ ಉಪಾಧ್ಯಕ್ಷರೂ ಆಗಿರುವ ಸಿಎಂ ಪುತ್ರ ವಿಜಯೇಂದ್ರ ಕೂಡ ಉಪಸ್ಥಿತರಿದ್ದರು.

ಜೆ.ಪಿ.ನಡ್ಡಾರನ್ನ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ

ಬಿ ವೈ ವಿಜಯೇಂದ್ರ ಕೂಡ ಜೆ.ಪಿ. ನಡ್ಡಾ ಮತ್ತು ಬಿಎಸ್​ವೈ ಭೇಟಿ ವೇಳೆ ಹಾಜರಿದ್ದಿದ್ದು, ಹಲವು ಕುತೂಹಲಗಳಿಗೆ ಕಾರಣವಾಗಿದೆ. ಆಡಳಿತದಲ್ಲಿ ಹಸ್ತಕ್ಷೇಪ ಆರೋಪಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಸಿಎಂ ಜೊತೆಗೂಡಿ ಪುತ್ರ ವಿಜಯೇಂದ್ರ ಕೂಡ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ವಿಜಯೇಂದ್ರ, ಸಿಎಂ ಅವರು ಇಂದು ದೆಹಲಿಯಲ್ಲಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಪ್ರಚಲಿತ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಉಪಸ್ಥಿತನಿದ್ದು, ರಾಷ್ಟ್ರೀಯ ಅಧ್ಯಕ್ಷರಿಗೆ ಗೌರವ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಿಎಂ ಖಡಕ್​ ಮಾತು

ABOUT THE AUTHOR

...view details