ಬೆಂಗಳೂರು: ಕೊರೊನಾ ಹರಡುವಿಕೆಗೆ ಕಡಿವಾಣ ಹಾಕಲು ರಾಜ್ಯದಲ್ಲಿ ಬಂದ್ ವಾತಾವರಣ ಮುಂದುವರೆಸುವ ಸುಳಿವನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿರ್ಬಂಧ ಮತ್ತಷ್ಟು ಬಿಗಿ ಸಾಧ್ಯತೆ; ಸುಳಿವು ಕೊಟ್ಟ ಸಿಎಂ - ಸಿಎಂ ಬಿ.ಎಸ್. ಯಡಿಯೂರಪ್ಪ ನ್ಯೂಸ್
ಕೊರೊನಾ ಹಿನ್ನಲೆಯಲ್ಲಿ ರಾಜ್ಯದಲ್ಲಿ ಬಂದ್ ವಾತಾವರಣ ಮುಂದುವರೆಸುವ ಸುಳಿವನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಕೊಟ್ಟಿದ್ದಾರೆ.

ಕೊರೊನಾ ವೈರಸ್ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ
ಕೊರೊನಾ ವೈರಸ್ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಕೊರೊನಾ ವೈರಸ್ ಕುರಿತು ಇವತ್ತು ತುರ್ತು ಸಭೆ ಕರೆದಿದ್ದೇವೆ. ಎಲ್ಲಾ ಚಟುವಟಿಕೆಗಳನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗಿದೆ. ಅದನ್ನು ಮುಂದುವರಿಸುವ ಸಾಧ್ಯತೆ ಹೆಚ್ಚಿದೆ. ಈ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಹೋಟೆಲ್ಗಳಲ್ಲಿ ಕೂಡ ಹೆಚ್ಚು ಜನ ಸೇರಬಾರದು. ಅಮೆರಿಕದಲ್ಲಿ ಅಧ್ಯಕ್ಷ ಟ್ರಂಪ್ ಕೂಡ 10ಕ್ಕಿಂತ ಹೆಚ್ಚು ಜನ ಸೇರಬಾರದು ಅಂತ ಹೇಳಿದ್ದಾರೆ. ನಾವೂ ಕೂಡ ಈ ನಿಟ್ಟಿನಲ್ಲಿ ನಿಯಮಗಳನ್ನು ಇನ್ನಷ್ಟು ಬಿಗಿ ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.