ಕರ್ನಾಟಕ

karnataka

ETV Bharat / city

ಮನಮೋಹನ್ ಸಿಂಗ್ ಆರೋಗ್ಯ ಚೇತರಿಕೆಗೆ ಕಾಂಗ್ರೆಸ್ ರಾಜ್ಯನಾಯಕರ ಹಾರೈಕೆ - ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಡಾ.ಮನಮೋಹನ್ ಸಿಂಗ್ ಅವರು‌ ಕೊರೊನಾ ಸೋಂಕಿಗೆ ಒಳಗಾಗಿರುವುದು ತಿಳಿದು ಬೇಸರವಾಯಿತು. ಅವರು ಶೀಘ್ರ ಗುಣಮುಖರಾಗಿ ಮರಳಲಿ..

Manmohan Singh
ಮನಮೋಹನ್ ಸಿಂಗ್

By

Published : Apr 19, 2021, 9:01 PM IST

ಬೆಂಗಳೂರು :ಕೊರೊನಾ ಪಾಸಿಟಿವ್ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆರೋಗ್ಯ ಚೇತರಿಕೆಗೆ ರಾಜ್ಯ ಕಾಂಗ್ರೆಸ್ ನಾಯಕರು ಹಾರೈಸಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿ ರಾಜ್ಯ ಕಾಂಗ್ರೆಸ್ ನಾಯಕರು ಮನಮೋಹನ್ ಸಿಂಗ್ ಆರೋಗ್ಯ ಚೇತರಿಕೆಗೆ ಹಾರೈಸಿ ಟ್ವೀಟ್ ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಟ್ವೀಟ್​ನಲ್ಲಿ, ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಡಾ.ಮನಮೋಹನ್ ಸಿಂಗ್ ಅವರು‌ ಕೊರೊನಾ ಸೋಂಕಿಗೆ ಒಳಗಾಗಿರುವುದು ತಿಳಿದು ಬೇಸರವಾಯಿತು. ಅವರು ಶೀಘ್ರ ಗುಣಮುಖರಾಗಿ ಮರಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಟ್ವೀಟ್​ನಲ್ಲಿ, ಕೊರೊನಾ ಪಾಸಿಟಿವ್ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆದಷ್ಟು ಶೀಘ್ರ ಗುಣಮುಖರಾಗಿ ಆಸ್ಪತ್ರೆ ಯಿಂದ ಹೊರ ಬರಲಿ. ತುಂಬು ಹೃದಯಗಳಲ್ಲಿ ಅವರಿಂದ ಉತ್ತಮ ರಾಜಕೀಯ ಮಾರ್ಗದರ್ಶನವನ್ನು ನಾವು ಆಶಿಸುತ್ತೇವೆ ಎಂದು ಹೇಳಿದ್ದಾರೆ.

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್‌ ಆರ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು ಹಾಗೂ ಮಾಜಿ ಸಂಸದರೂ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಮನಮೋಹನ್ ಸಿಂಗ್ ಆರೋಗ್ಯ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.

ABOUT THE AUTHOR

...view details