ಕರ್ನಾಟಕ

karnataka

ETV Bharat / city

ಕಾಂಗ್ರೆಸ್‌ನ 2ನೇ ದಿನದ ನವ ಸಂಕಲ್ಪ ಶಿಬಿರ.. ದಿಲ್ಲಿಯಿಂದ ಖರ್ಗೆ ವಾಪಸ್‌, 2ನೇ ಅಭ್ಯರ್ಥಿ ಖಾನ್‌ ಕಣದಲ್ಲಿರ್ತಾರಾ!? - Meeting about election preparation

ದಿಲ್ಲಿ ವರಿಷ್ಠರ ಜೊತೆ ಚರ್ಚಿಸಿ ಆಗಮಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ನಾಯಕರಿಗೆ ಮಾಹಿತಿ ನೀಡಿದ್ದಾರೆ. ತಮ್ಮ ಎರಡನೇ ಅಭ್ಯರ್ಥಿಯಾದ ಮನ್ಸೂರ್ ಅಲಿಖಾನ್ ನಾಮಪತ್ರ ಹಿಂಪಡೆಯಬೇಕೋ, ಬೇಡವೋ ಎಂಬ ಬಗ್ಗೆ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ..

Second day KPCC Nava Sankalpa Shibira
ಕೆಪಿಸಿಸಿ ಇಂದು 2 ನೇ ದಿನದ ನವ ಸಂಕಲ್ಪ ಶಿಬಿರ

By

Published : Jun 3, 2022, 1:06 PM IST

ಬೆಂಗಳೂರು :ನಗರದ ಹೊರವಲಯದ ಖಾಸಗಿ ರೆಸಾರ್ಟ್​ನಲ್ಲಿ ಕಾಂಗ್ರೆಸ್‌ ನವ ಸಂಕಲ್ಪ ಶಿಬಿರವು 2ನೇ ದಿನವೂ ಮುಂದುವರೆದಿದೆ. 2023ರ ವಿಧಾನಸಭಾ ಚುನಾವಣೆ ಸಿದ್ಧತೆ ಹಾಗೂ ಕಾರ್ಯತಂತ್ರದ ಬಗ್ಗೆ ಇಂದು ಸಹ ಚರ್ಚೆಮುಂದುವರೆದಿದೆ. ಪಕ್ಷ ಸಂಘಟನೆಯಲ್ಲಿ ಮಾಡಬೇಕಾದ ಕಾರ್ಯಕ್ರಮದ ಬಗ್ಗೆ ಚರ್ಚೆ ಆಗಲಿದೆ. ಚುನಾವಣೆಗೆ ಬಾಕಿ ಇರುವ 10 ತಿಂಗಳಲ್ಲಿ ಸರ್ಕಾರದ ವಿರುದ್ಧ ಮಾಡಬೇಕಾದ ಪ್ರತಿಭಟನೆಗಳು ಮತ್ತು ಹೋರಾಟದ ಬಗ್ಗೆ ಚರ್ಚೆ ನಡೆಯಲಿದೆ.

ಪಂಚಾಯತ್‌ ಮತ್ತು ಬೂತ್ ಮಟ್ಟದವರೆಗೂ ಸರ್ಕಾರದ ವೈಫಲ್ಯಗಳನ್ನು ತೆಗೆದುಕೊಂಡು ಹೋಗುವ ಬಗ್ಗೆ ಚಿಂತನೆ ನಡೆಸಲಿರುವ ನಾಯಕರು, ವಿಶೇಷ ಕಾರ್ಯತಂತ್ರ ಹೆಣೆಯುವ ಸಂಬಂಧ ಚರ್ಚಿಸಲಿದ್ದಾರೆ. ಇಂದಿನ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲಾ, ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವರು ನಾಯಕರು ಭಾಗಿಯಾಗಿದ್ದಾರೆ.

ದೆಹಲಿಯಿಂದ ವಾಪಸಾದ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇರವಾಗಿ ಸಭೆ ನಡೆಯುತ್ತಿರುವ ಖಾಸಗಿ ರೆಸಾರ್ಟ್​ಗೆ ಆಗಮಿಸಿದ್ದಾರೆ. ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್​ನ ಎರಡನೇ ಅಭ್ಯರ್ಥಿಯನ್ನು ಕಣದಿಂದ ಹಿಂಪಡೆಯುವ ಬಗ್ಗೆ ಚರ್ಚೆಗೆ ತೆರಳಿದ್ದ ಖರ್ಗೆ, ಹೈಕಮಾಂಡ್ ನಾಯಕರ ಉತ್ತರ ಪಡೆದು ವಾಪಸಾಗಿದ್ದಾರೆ. ಇದೀಗ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಲಾಗಿದ್ದು, ತಮ್ಮ ಚರ್ಚೆಯಲ್ಲಿ ಕೇಳಿಬಂದ ಅಭಿಪ್ರಾಯವನ್ನು ವಿವರಿಸಲಿದ್ದಾರೆ.

ನಿನ್ನೆ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಖರ್ಗೆ ಸುದೀರ್ಘ ಚರ್ಚೆ ನಡೆಸಿದ್ದರು. ರಾಜ್ಯಸಭೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಇಂದು ಕಡೆಯ ದಿನವಾಗಿದೆ. ಸದ್ಯ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿ ತಮ್ಮ ಎರಡನೇ ಅಭ್ಯರ್ಥಿಯನ್ನು ಕಣದಲ್ಲಿ ಮುಂದುವರಿಸಬೇಕೋ ಇಲ್ಲವೋ ಎಂಬುದನ್ನು ನಾಯಕರು ತೀರ್ಮಾನಿಸಲಿದ್ದಾರೆ.

ಈ ಕಾರಣಕ್ಕಾಗಿಯೇ ಅವರು ನವ ಸಂಕಲ್ಪ ಶಿಬಿರ ಮೊದಲ ದಿನ ಸಭೆಗೆ ಗೈರಾಗಿದ್ದರು. ದಿಲ್ಲಿ ವರಿಷ್ಠರ ಜೊತೆ ಚರ್ಚಿಸಿ ಆಗಮಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ನಾಯಕರಿಗೆ ಮಾಹಿತಿ ನೀಡಿದ್ದಾರೆ. ಅವರು ತಮ್ಮ ಎರಡನೇ ಅಭ್ಯರ್ಥಿಯಾದ ಮನ್ಸೂರ್ ಅಲಿಖಾನ್ ನಾಮಪತ್ರ ಹಿಂಪಡೆಯಬೇಕೋ, ಬೇಡವೋ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ.

ಪಾಟೀಲ್, ಖಾನ್ ಗೈರು :ಎರಡನೇ ದಿನವೂ ನವ ಸಂಕಲ್ಪ ಶಿಬಿರಕ್ಕೆ ಮಾಜಿ ಸಚಿವರಾದ ಜಮೀರ್ ಅಹಮದ್ ಖಾನ್ ಮತ್ತು ಎಸ್.ಆರ್.ಪಾಟೀಲ್ ಆಗಮಿಸಲಿಲ್ಲ. ಪರಿಷತ್ ಟಿಕೆಟ್ ಸಿಗದ ಹಿನ್ನೆಲೆ ಅಸಮಾಧಾನ ವ್ಯಕ್ತಪಡಿಸಿದ್ದ ಎಸ್.ಆರ್.ಪಾಟೀಲ್, ತಮ್ಮ ಮುನಿಸನ್ನು ಮುಂದುವರಿಸಿದ್ದಾರೆ. ಬೆಂಗಳೂರಿನತ್ತ ಮುಖ ಕೂಡ ಹಾಕಿಲ್ಲ. ಜಮೀರ್ ಅಹಮದ್ ನಗರದಲ್ಲಿಯೇ ಇದ್ದಾರೆ ಎಂಬ ಮಾಹಿತಿ ಇದ್ದು, ಶಿಬಿರದತ್ತ ಸುಳಿದೇ ಇಲ್ಲ.

ವಿಧಾನಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ತಮಗೆ ಟಿಕೆಟ್ ಸಿಗದ ಹಿನ್ನೆಲೆ ಬೇಸರಗೊಂಡು ಸಾಮಾಜಿಕ ಜಾಲತಾಣಗಳ ಮೂಲಕ ವಿಡಿಯೋ ಬಿಡುಗಡೆ ಮಾಡಿದ್ದರು. ಪಕ್ಷದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಪಕ್ಷದ ಯಾವುದೇ ಚಟುವಟಿಕೆಯಲ್ಲೂ ಕಾಣಿಸಿಕೊಳ್ಳದ ಅವರು ನಿನ್ನೆ ಶಿಬಿರದಲ್ಲಿ ಭಾಗವಹಿಸಿರಲಿಲ್ಲ. ಆದರೆ, ಎರಡನೇ ದಿನದ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಇದನ್ನೂ ಓದಿ:ನವ ಸಂಕಲ್ಪ ಶಿಬಿರಕ್ಕೆ ಕೆಲ ಅತೃಪ್ತರ ಗೈರು.. ರಾಜ್ಯ ನಾಯಕರ ಸಂಘಟನೆ ಯತ್ನಕ್ಕೆ ಆಗುತ್ತಾ ಹಿನ್ನಡೆ?!

ABOUT THE AUTHOR

...view details