ಕರ್ನಾಟಕ

karnataka

ETV Bharat / city

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಬಾರದು: ಕಾಂಗ್ರೆಸ್​​​​ ಹಿಂದುಳಿದ ವರ್ಗಗಳ ಸಮಿತಿಯಿಂದ ಒತ್ತಾಯ - ಶಾಸಕರಾದ ರಿಜ್ವಾನ್ ಹರ್ಷದ್ ಹಾಗೂ ಮಂಜುನಾಥ್ ಅವರನ್ನು ಸನ್ಮಾನಿಸುವ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರ ವಾಪಸ್ ಪಡೆಯುವಂತೆ ಒತ್ತಾಯಿಸಲು ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ನಿರ್ಧರಿಸಿದೆ.

KN_BNG_02_CONGRESS_MEETING_SCRIPT_9020923
ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಬಾರದು: ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿಯಿಂದ ಒತ್ತಾಯ

By

Published : Dec 17, 2019, 3:19 PM IST

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರ ವಾಪಸ್ ಪಡೆಯುವಂತೆ ಒತ್ತಾಯಿಸಲು ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ನಿರ್ಧರಿಸಿದೆ.

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಬಾರದು: ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿಯಿಂದ ಒತ್ತಾಯ

ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಎಂ.ಡಿ.ಲಕ್ಷ್ಮಿ ನಾರಾಯಣ್ ನೇತೃತ್ವದಲ್ಲಿ ನಿಯೋಗ ತೆರಳಿ ಸಿದ್ದರಾಮಯ್ಯ ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಲು ಹಾಗೂ ತಾವು ಕೈಗೊಂಡ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್​​ಗೆ ಪತ್ರ ರೂಪದಲ್ಲಿ ತಲುಪಿಸಲು ನಿರ್ಧರಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಬಾರದು. ಅವರ ರಾಜೀನಾಮೆ ಅಂಗೀಕಾರ ಮಾಡಿದ್ರೆ ಪಕ್ಷಕ್ಕೆ ದೊಡ್ಡ ಹೊಡೆತ ಬೀಳುತ್ತೆ. ಇದರಿಂದಾಗಿ ಸಿದ್ದರಾಮಯ್ಯ ರಾಜೀನಾಮೆಯನ್ನು ಸ್ವೀಕರಿಸಬಾರದು ಎಂದು ಹೈಕಮಾಂಡ್​ಗೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

ಇದು ಈಗ ಇರುವ ಪಕ್ಷದ ಪರಿಸ್ಥಿತಿಗೆ ಸರಿಯಾದ ನಿರ್ಧಾರ ಅಲ್ಲ. ನಾವು ಈಗ ಸಿದ್ದರಾಮಯ್ಯ ಅವರ ಮನವೊಲಿಸುವ ಕೆಲಸ ಮಾಡುತ್ತೇವೆ. ಜೊತೆಗೆ ಎಐಸಿಸಿ ಹೈಕಮಾಂಡ್​​​ಗೂ ಕೂಡ ನಾವು ಮನವಿ ಸಲ್ಲಿಸುತ್ತೇವೆ. ಸಿದ್ದರಾಮಯ್ಯ ರಾಜೀನಾಮೆಯನ್ನು ಅಂಗೀಕಾರ ಮಾಡಬಾರದು ಎಂದು ನಮ್ಮ ಪದಾಧಿಕಾರಿಗಳು ಕೂಡ ಒತ್ತಾಯ ಮಾಡಬೇಕು ಎಂದು ಸೂಚಿಸಿದರು. ಇದೇ ಸಭೆಯಲ್ಲಿ ಇತ್ತೀಚೆಗೆ ಉಪ ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರಾದ ರಿಜ್ವಾನ್ ಹರ್ಷದ್ ಹಾಗೂ ಮಂಜುನಾಥ್ ಅವರನ್ನು ಸನ್ಮಾನಿಸುವ ವಿವರ ಪ್ರಕಟಿಸಲಾಯಿತು.

ABOUT THE AUTHOR

...view details