ಬೆಂಗಳೂರು: ವಿಧಾನಸೌಧದಲ್ಲಿಂದು ಸಂಜೆ ನಡೆದ ಸಿಎಂ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಡಿಸಿಎಂ ಅಶ್ವತ್ ನಾರಾಯಣ್ ಮಾತಿಗೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಅಸಮಾಧಾನಗೊಂಡು ಕಣ್ಣೀರು ಹಾಕಿದರು ಎಂದು ಹೇಳಲಾಗ್ತಿದೆ.
ಕೊರೊನಾ ಸಂಬಂಧ ನಡೆದ ತುರ್ತು ಸಭೆಯಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ ಅವರು, ಪಾಸ್ ನೀಡುವ ವಿಚಾರವಾಗಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರನ್ನು ತರಾಟೆಗೆ ತೆಗೆದಕೊಂಡಿದ್ದಾರೆ. ಅಲ್ಲದೆ ಕೆಲ ಅಂಗಡಿಗಳನ್ನು ಬೇಕಂತಲೇ ತೆರೆಯಿಸಿ ಕಮಿಷನ್ ಪಡೆಯುತ್ತಿರುವುದಾಗಿ ಆರೋಪಿಸಿದ್ರು ಎನ್ನಲಾಗ್ತಿದೆ.