ಬೆಂಗಳೂರು:ಸಚಿವಾಲಯದ ಎಲ್ಲ ಇಲಾಖೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯಲ್ಲಿ(Biometric attendance system) ಎಲ್ಲ ಅಧಿಕಾರಿ/ಸಿಬ್ಬಂದಿ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್( Ravi Kumar Chief Secretary of Karnataka) ತಿಳಿಸಿದ್ದಾರೆ.
ಈ ಸಂಬಂಧ ನೂತನ ಆದೇಶ ಹೊರಡಿಸಿರುವ ಅವರು, ಕೆಸಿಎಸ್ಆರ್(KCSR) ಅನ್ವಯ ಕಚೇರಿಗಳಿಗೆ ನಿಗದಿತ ಸಮಯದೊಳಗೆ ಹಾಜರಾಗುವುದು ಹಾಗೂ ಪ್ರತಿ ದಿನ ಒಟ್ಟು 7.30 ಗಂಟೆ ಸಮಯ ಕರ್ತವ್ಯ ನಿರ್ವಹಿಸುವುದು ಸಹ ಕಡ್ಡಾಯವಾಗಿರುತ್ತದೆ.
ಆದರೆ, ಈ ನಿಟ್ಟಿನಲ್ಲಿ, ಸರ್ಕಾರದ ಆದೇಶಗಳು ಹಾಗೂ ಸುತ್ತೋಲೆಗಳನ್ನು ಪಾಲಿಸದೇ ಬೇಜವಾಬ್ದಾರಿ ತೋರುತ್ತಿರುವುದನ್ನು ಗಮನಿಸಲಾಗಿದೆ. ಪ್ರಸ್ತುತ ಸಚಿವಾಲಯದ ಕೆಲವು ಇಲಾಖೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪರಿಶೀಲಿಸಲಾಗಿರುತ್ತದೆ. ಇಲಾಖೆಗಳ ಬಯೋಮೆಟ್ರಿಕ್ ಹಾಜರಾತಿಯಲ್ಲಿ ಈ ಕೆಳಕಂಡ ನ್ಯೂನತೆಗಳು ಕಂಡು ಬಂದಿರುತ್ತವೆ ಎಂದು ತಿಳಿಸಿದ್ದಾರೆ.
ಒಟ್ಟು 10 ಅಂಶಗಳ ನ್ಯೂನತೆಯನ್ನು ತಿಳಿಸಿರುವ ಅವರು, ಪ್ರಮುಖವಾಗಿ..
- ಬಹುತೇಕ ಅಧಿಕಾರಿ/ಸಿಬ್ಬಂದಿ ಕಚೇರಿಗೆ ತಡವಾಗಿ ಆಗಮಿಸುತ್ತಿರುವುದನ್ನು ಮತ್ತು ನಿಗದಿತ 7.30 ಗಂಟೆಗಳಷ್ಟು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದೆ.
- ವರ್ಗಾವಣೆಯಾದ, ಮುಂಬಡ್ತಿಯಾದ ಬಹುತೇಕ ಅಧಿಕಾರಿ/ಸಿಬ್ಬಂದಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಅವರು ಕಾರ್ಯನಿರ್ವಹಿಸುತ್ತಿರುವ ಇಲಾಖೆಯಲ್ಲಿ ದಾಖಲಿಸುತ್ತಿಲ್ಲ.
- ಬಹುತೇಕ ಅಧಿಕಾರಿ/ಸಿಬ್ಬಂದಿ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡುತ್ತಿಲ್ಲ.
- ಅಧಿಕಾರಿಗಳು ಫ್ಲೆಕ್ಸಿ ಸೌಲಭ್ಯವನ್ನು ದುರುಪಯೋಗ ಮಾಡಿಕೊಳ್ಳುತ್ತಿರುವುದು ಹಾಗೂ ತಿಂಗಳಿನಲ್ಲಿ ಬಹುತೇಕ ಮಿಸ್ಸಿಂಗ್ ಫ್ಲಾಶ್ ಗಳನ್ನು ಸರಿಪಡಿಸಿಕೊಳ್ಳುತ್ತಿರುವುದನ್ನು ಗಮನಿಸಲಾಗಿದೆ. ಆದೇಶ ಪ್ರತಿ