ಕರ್ನಾಟಕ

karnataka

ETV Bharat / city

ಸಿಎಂ ಬಿಎಸ್​ವೈ ವಿರುದ್ಧದ ಕಾಂಗ್ರೆಸ್ ದೂರು ಹಾಸ್ಯಾಸ್ಪದ: ಡಿಸಿಎಂ ಕಾರಜೋಳ

ನಕಲಿ ಧ್ವನಿ ಸುರುಳಿ ಸೃಷ್ಟಿಸಿ, ಜನತೆಯಲ್ಲಿ ಗೊಂದಲ ಮೂಡಿಸುವುದು ಕಾಂಗ್ರೆಸ್‌ಗೆ ಕರಗತವಾಗಿದೆ. ಇಂತಹ ವ್ಯರ್ಥ ಪ್ರಯತ್ನಗಳು ಕಾಂಗ್ರೆಸ್​​ಗೆ ಶೋಭೆ ತರುವುದಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

By

Published : Nov 3, 2019, 1:51 AM IST

ಡಿಸಿಎಂ ಗೋವಿಂದ ಕಾರಜೋಳ

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ರಾಜಭವನಕ್ಕೆ ತೆರಳಿ, ಸಿಎಂ ಬಿಎಸ್​ವೈ ಸರ್ಕಾರದ ವಿರುದ್ಧ ದೂರು ನೀಡಿರುವುದು ಹಾಸ್ಯಾಸ್ಪದ ಸಂಗತಿ ಎಂದು ಡಿಸಿಎಂ ಗೋವಿಂದ ಕಾರಜೋಳ 'ಕೈ' ನಾಯಕರ ನಡೆಯನ್ನು ಟೀಕೆ ಮಾಡಿದ್ದಾರೆ.

ನಕಲಿ ಧ್ವನಿ ಸುರುಳಿ ಸೃಷ್ಟಿಸಿ, ಜನತೆಯಲ್ಲಿ ಗೊಂದಲ ಮೂಡಿಸುವುದು ಕಾಂಗ್ರೆಸ್‌ಗೆ ಕರಗತವಾಗಿದೆ. ಅವರು ಯಾವ ಆಧಾರದಲ್ಲಿ ಇಂತಹ ಹೇಳಿಕೆ ನೀಡುತ್ತಿದ್ದಾರೆ..? ಇಂತಹ ವ್ಯರ್ಥ ಪ್ರಯತ್ನಗಳು ಕಾಂಗ್ರೆಸ್​​ಗೆ ಶೋಭೆ ತರುವುದಿಲ್ಲ. ಅನರ್ಹ ಶಾಸಕರ ಪ್ರಕರಣ ಸರ್ವೋಚ್ಛ ನ್ಯಾಯಾಲಯದಲ್ಲಿರುವಾಗ ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿ ನ್ಯಾಯಾಲಯದ ಮೇಲೆ ಪ್ರಭಾವ ಬೀರಿರುವುದು ಮಹಾಪರಾಧ ಮತ್ತು ರಾಜಕೀಯ‌ ಕುತಂತ್ರವಾಗಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ನೆರೆ ಸಂತ್ರಸ್ತರಿಗೆ ಹಾಗೂ ಜನತೆಯ ಕಷ್ಟಗಳಿಗೆ ಸ್ಪಂದಿಸುವುದನ್ನು ಬಿಟ್ಟು, ಅನಗತ್ಯ ಗೊಂದಲ ಸೃಷ್ಟಿಸುವುದು ಸರಿಯಲ್ಲ ಇದು ಕಾಂಗ್ರೆಸ್ ಪಕ್ಷದ ಬೌದ್ಧಿಕ‌ ದಿವಾಳಿಯ ಸಾಕ್ಷಿಯಾಗಿದೆ. ಸಿಎಂ ಬಿಎಸ್​ ಯಡಿಯೂರಪ್ಪ ಪ್ರಕೃತಿವಿಕೋಪದ ಸಂದರ್ಭದಲ್ಲಿ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬಿ, ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುತ್ತಿರುವ ಸಂದರ್ಭದಲ್ಲಿ‌ ಕಾಂಗ್ರೆಸ್ ನಾಯಕರು ಗೊಂದಲ ಮೂಡಿಸಿ, ಪುಕ್ಕಟೆ ಪ್ರಚಾರ ಪಡೆಯುವುದು ಸರಿಯಲ್ಲ ಎಂದು‌ ಡಿಸಿಎಂ ಕಾರಜೋಳ ತಿಳಿಸಿದ್ದಾರೆ.

ABOUT THE AUTHOR

...view details