ಬೆಂಗಳೂರು:ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ವಿಳಂಬವಾಗುತ್ತಿರುವುದರ ವಿರುದ್ಧ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಇದೇನು ಪ್ರಜಾಪ್ರಭುತ್ವವೇ ? ಏಕಚಕ್ರಾಧಿಪತ್ಯವೇ ? ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಖಾರವಾಗಿ ಪ್ರಶ್ನಿಸಿದ್ದಾರೆ.
ಮೂರು ಪ್ರತ್ಯೇಕ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಡಿಯೂರಪ್ಪ ಹಾಗೂ ರಾಜ್ಯಪಾಲರು, ಇಬ್ಬರ ವಿರುದ್ಧವೂ ಕಿಡಿಕಾರಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ತೋರಿಸಿದ ಆಸಕ್ತಿಯನ್ನು ಬಿಎಸ್ವೈ ಹಾಗೂ ಬಿಜೆಪಿ, ಸಚಿವ ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತಿವೃಷ್ಟಿ, ಅನಾವೃಷ್ಟಿಯಿಂದ ರಾಜ್ಯದ ಜನರು ತತ್ತರಿಸಿದ್ದಾರೆ. ಆಡಳಿತ ಯಂತ್ರ ಸ್ಥಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ..? ಏಕಚಕ್ರಾಧಿಪತ್ಯವೇ? ಎಂದು ತಮ್ಮ ಮೊದಲ ಟ್ವೀಟ್ನಲ್ಲಿ ಸಿಎಂಗೆ ಪ್ರಶ್ನೆ ಮಾಡಿದ್ದಾರೆ.