ಕರ್ನಾಟಕ

karnataka

ETV Bharat / city

ನಾಲ್ಕನೇ ಕ್ಲಾಸ್​ನಲ್ಲಿ ಕುವೆಂಪು ಪಾಠ ಕೈ ಬಿಟ್ಟಿಲ್ಲ, ಪರಿಷ್ಕರಣೆ ಸಹ ಮಾಡಿಲ್ಲ; ಸ್ಪಷ್ಟೀಕರಣ ಕೊಟ್ಟ ಪಠ್ಯಪುಸ್ತಕ ಸಂಘ - Text book Committee

'ಪ್ರತಿಯೊಬ್ಬರೂ ವಿಶಿಷ್ಟ' ಎಂಬ ಪಾಠದಲ್ಲಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಶೀರ್ಷಿಕೆ ಅಡಿಯಲ್ಲಿ ಇದ್ದ – 9 ಸಾಲುಗಳ ವಿಷಯಾಂಶವನ್ನು 2022-23ನೇ ಸಾಲಿನ ಪರಿಸರ ಅಧ್ಯಯನ ಪಠ್ಯಪುಸ್ತಕದಲ್ಲೂ ಯಾವುದೇ ಬದಲಾವಣೆ ಇಲ್ಲದೆ ಮುಂದುವರೆಸಲಾಗಿದೆ ಎಂದು ಪಠ್ಯ ಪುಸ್ತಕ ಸಂಘ ಸ್ಪಷ್ಟೀಕರಣ ನೀಡಿದೆ.‌

Textbook Association clarrification
ಸ್ಪಷ್ಟೀಕರಣ ಕೊಟ್ಟ ಪಠ್ಯಪುಸ್ತಕ ಸಂಘ

By

Published : May 24, 2022, 2:59 PM IST

ಬೆಂಗಳೂರು: ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯ ಪುರಾಣ ಸದ್ಯಕ್ಕೆ ಮುಗಿಯುವಂತೆ ಕಾಣ್ತಿಲ್ಲ. ಸದ್ಯ ನಾಲ್ಕನೇ ತರಗತಿಯಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಪಾಠ ಕೈ ಬಿಡಲಾಗಿದೆ ಎಂಬ ಸುದ್ದಿಗೆ ಕರ್ನಾಟಕ ಪಠ್ಯಪುಸ್ತಕ ಸಂಘವು ಸ್ಪಷ್ಟೀಕರಣ ಕೊಟ್ಟಿದೆ.

ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯವರು 4ನೇ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕವನ್ನು ಪರಿಷ್ಕರಿಸಿದ್ದು, ಕುವೆಂಪು ಅವರ ಬಗ್ಗೆ ಇದ್ದ ವಿಷಯಾಂಶವನ್ನು ಕೈಬಿಡಲಾಗಿದೆ, ಅವಮಾನಗೊಳಿಸಲಾಗಿದೆ ಎನ್ನಲಾಗುತ್ತಿದೆ. ಆದರೆ ವಾಸ್ತವವಾಗಿ 4ನೇ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕವನ್ನು ರೋಹಿತ್ ಚಕ್ರತೀರ್ಥ ಸಮಿತಿಯವರು ಪರಿಷ್ಕರಿಸಿಲ್ಲ.

ಬರಗೂರು ರಾಮಚಂದ್ರಪ್ಪ ಅವರ ಸಮಿತಿಯು 2017-18ನೇ ಸಾಲಿನಲ್ಲಿ ಪರಿಷ್ಕರಿಸಿದ್ದ 4ನೇ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕದ 'ಪ್ರತಿಯೊಬ್ಬರೂ ವಿಶಿಷ್ಟ' ಎಂಬ ಪಾಠದಲ್ಲಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಶೀರ್ಷಿಕೆ ಅಡಿಯಲ್ಲಿ ಇದ್ದ – 9 ಸಾಲುಗಳ ವಿಷಯಾಂಶವನ್ನು 2022-23ನೇ ಸಾಲಿನ ಪರಿಸರ ಅಧ್ಯಯನ ಪಠ್ಯಪುಸ್ತಕದಲ್ಲೂ ಯಾವುದೇ ಬದಲಾವಣೆ ಇಲ್ಲದೆ ಮುಂದುವರೆಸಲಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.‌

ಇದನ್ನೂ ಓದಿ:ಭುಗಿಲೆದ್ದ ಪಠ್ಯಪುಸ್ತಕ ಪರಿಷ್ಕರಣೆ ಸೇರ್ಪಡೆ-ಕಡಿತ ವಿಚಾರ.. ಎಲ್ಲದಕ್ಕೂ ಖುದ್ದು ವಿವರಣೆ ನೀಡಿದ್ರು ಶಿಕ್ಷಣ ಸಚಿವ

ABOUT THE AUTHOR

...view details