ಕರ್ನಾಟಕ

karnataka

ETV Bharat / city

ಪರಿಷತ್​ನಲ್ಲಿ ಸದ್ದು ಮಾಡಿದ ಬಿಟ್ ಕಾಯಿನ್.. ಸಮರ್ಥಿಸಿಕೊಂಡ ಸರ್ಕಾರ - ಪರಿಷತ್​ನಲ್ಲಿ ಬಿಟ್ ಕಾಯಿನ್ ವಿಚಾರ

ಬಿಟ್ ಕಾಯಿನ್ ವಿಚಾರವಾಗಿ ಸರ್ಕಾರದ ತನಿಖೆಯಲ್ಲಿ ಲೋಪ ಆಗಿಲ್ಲ. ಶ್ರೀಕಿಯನ್ನು ರಕ್ಷಣೆ ಮಾಡಿಲ್ಲ. ಪೊಲೀಸರು ಹೊಡೆದು, ಹಿಂಸಿಸಿಲ್ಲ. ತನಿಖೆ ಸಮರ್ಪಕವಾಗಿ, ಪಾರದರ್ಶಕವಾಗಿ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸದನಕ್ಕೆ ಸ್ಪಷ್ಟಪಡಿಸಿದ್ದಾರೆ.

discussion about bitcoin scam in belgaum council session
ಪರಿಷತ್​ನಲ್ಲಿ ಸದ್ದು ಮಾಡಿದ ಬಿಟ್ ಕಾಯಿನ್ ವಿಚಾರ

By

Published : Dec 16, 2021, 6:47 PM IST

Updated : Dec 16, 2021, 7:20 PM IST

ಬೆಳಗಾವಿ: ವಿಧಾನ ಪರಿಷತ್​​ನಲ್ಲಿಂದು ಬಿಟ್ ಕಾಯಿನ್ ವಿಚಾರ ಪ್ರಸ್ತಾಪವಾಗಿ ಚರ್ಚೆ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಯಾವುದೇ ಕಾರಣಕ್ಕೂ ಬಿಟ್ ಕಾಯಿನ್ ವಿಚಾರವಾಗಿ ಸರ್ಕಾರದ ತನಿಖೆಯಲ್ಲಿ ಲೋಪ ಆಗಿಲ್ಲ. ಶ್ರೀಕಿಯನ್ನು ರಕ್ಷಣೆ ಮಾಡಿಲ್ಲ. ಪೊಲೀಸರು ಹೊಡೆದು, ಹಿಂಸಿಸಿಲ್ಲ. ತನಿಖೆ ಸಮರ್ಪಕವಾಗಿ, ಪಾರದರ್ಶಕವಾಗಿ ನಡೆದಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಬಿಟ್ ಕಾಯಿನ್ ಕದಿಯಲು ಪೊಲೀಸರು ಶ್ರೀಕಿಯನ್ನು ಬಳಸಿಕೊಂಡಿದ್ದಾರೆ, ಡ್ರಗ್ಸ್ ನೀಡಿದ್ದಾರೆ ಎನ್ನುವುದು ಆಧಾರ ರಹಿತ ಆರೋಪ. ಬೆಂಗಳೂರು ಪೊಲೀಸರು ಸಮರ್ಥವಾಗಿ ತನಿಖೆ ನಡೆಸುತ್ತಿದ್ದಾರೆ. ಶ್ರೀಕಿ ಸದ್ಯ ಆಚೆಗೆ ಇದ್ದು, ಯಾರು ಬೇಕಾದರೂ ಸಂಪರ್ಕಿಸಿ ಸಮಾಲೋಚನೆ ಮಾಡಬಹುದು. ಒಟ್ಟಾರೆ ಬಿಟ್​ ಕಾಯಿನ್​​ ವಿಚಾರದ ತನಿಖೆಯಲ್ಲಿ ಯಾವುದೇ ಲೋಪ ಆಗಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ

ಯು ಬಿ ವೆಂಕಟೇಶ್ ಅಸಮಾಧಾನ:

ಸಚಿವರ ಉತ್ತರದಿಂದ ಸಮಾಧಾನಗೊಳ್ಳದ ಕಾಂಗ್ರೆಸ್​ ಸದಸ್ಯ ಯು ಬಿ ವೆಂಕಟೇಶ್, ಶ್ರೀಕಿ ಅವರ ತಂದೆ ತನ್ನ ಮಗನಿಗೆ ಡ್ರಗ್ಸ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಪೊಲೀಸರು ಹಿಂಸೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕೀಯ ನಾಯಕರು ಭಾಗಿಯಾಗಿರುವ ಆರೋಪವೂ ಕೇಳಿ ಬಂದಿದೆ.

ಇದರಿಂದಾಗಿ ಪ್ರಕರಣದ ಸೂಕ್ತ ತನಿಖೆ ನಡೆಸಬೇಕು. ಅನಗತ್ಯವಾಗಿ ಈ ಪ್ರಕರಣದಲ್ಲಿ ಭಾಗಿಯಾಗಿರುವವರಿಗೆ ಕಾಪಾಡುವ ಕಾರ್ಯ ಸರ್ಕಾರ ಮಾಡಬಾರದು. ಶ್ರೀಕಿಗೆ ಡ್ರಗ್ಸ್​​ ನೀಡಿರುವ ಆರೋಪದ ನಂತರ ನಡೆಸಿದ ತಪಾಸಣೆಯನ್ನು ಪೊಲೀಸರು ಸಮರ್ಪಕವಾಗಿ ಮಾಡಿಲ್ಲ. ಮೊದಲು ಹೊಟ್ಟೆಯನ್ನು ಸ್ವಚ್ಛಗೊಳಿಸಿದ ನಂತರ ಎಫ್ಎಸ್ಎಲ್ ವರದಿಗೆ ಕಳುಹಿಸಿಕೊಡಲಾಗಿದೆ. ಇದು ಸರಿಯಲ್ಲ ಎಂದರು.

ಆರೋಗ್ಯ ಸಚಿವ ಸ್ಪಷ್ಟನೆ:

ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ತಪಾಸಣೆಯಲ್ಲಿ ಯಾವುದೇ ಲೋಪ ಆಗಿಲ್ಲ. ಸರ್ಕಾರ ವ್ಯವಸ್ಥಿತವಾಗಿಯೇ ತಪಾಸಣೆ ನಡೆಸಿದೆ. ಎಫ್ಎಸ್ಎಲ್ ವರದಿಗೆ ಕಳುಹಿಸಿ ಕೊಡುವ ಮುನ್ನ ಬೌರಿಂಗ್ ಆಸ್ಪತ್ರೆಯಲ್ಲಿ ಕೋವಿಡ್ ತಪಾಸಣೆ ನಡೆಸಲಾಗಿದೆ ಅಷ್ಟೇ ಎಂದರು.

ಇದನ್ನೂ ಓದಿ:ಹೈನುಗಾರಿಕೆ ಪ್ರೋತ್ಸಾಹ ಧನ ಹೆಚ್ಚಿಸಿ: ಯು.ಟಿ ಖಾದರ್

ಇದೊಂದು ಗಂಭೀರ ಸಮಸ್ಯೆಯಾಗಿದೆ. ಈ ವಿಚಾರವನ್ನು ಅರ್ಧ ಗಂಟೆ ಚರ್ಚೆಗೆ ನೀಡಬೇಕು ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು. ಅದಕ್ಕೆ ಪ್ರತ್ಯೇಕ ಪತ್ರವನ್ನು ನೀಡಿ ಅವಕಾಶ ಮಾಡಿಕೊಡಲಾಗುವುದು ಎಂದು ಹೊರಟ್ಟಿ ಭರವಸೆ ನೀಡಿದರು

Last Updated : Dec 16, 2021, 7:20 PM IST

ABOUT THE AUTHOR

...view details