ಕರ್ನಾಟಕ

karnataka

By

Published : May 28, 2020, 1:36 PM IST

ETV Bharat / city

ಗ್ರಾಮ ಪಂಚಾಯತ್​ಗೆ ನಾಮನಿರ್ದೇಶನ ಮಾಡಿದರೆ ಹೋರಾಟ: ಡಿ.ಕೆ. ಶಿವಕುಮಾರ್​ ಎಚ್ಚರಿಕೆ

ಸರ್ಕಾರ ಗ್ರಾಮ ಪಂಚಾಯತ್​ಗಳಿಗೆ ನಾಮ ನಿರ್ದೇಶನ ಮಾಡಲು ಹೊರಟರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಅವರು ಶಿವಕುಮಾರ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

dk-shivakumar-statement-on-gramapanchayathi-nomination
ಡಿಕೆ ಶಿವಕುಮಾರ

ಬೆಂಗಳೂರು: ಗ್ರಾಮ ಪಂಚಾಯತ್​ಗಳಿಗೆ ಸರ್ಕಾರ ನಾಮನಿರ್ದೇಶನ ಮಾಡಲು ಹೊರಟಿದ್ದು, ಇದು ಹೀಗೆ ಮುಂದುವರೆದರೆ ನಾವು ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಎಚ್ಚರಿಕೆ ರವಾನಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್​ಗಳಿಗೆ ಸರ್ಕಾರ ನಾಮನಿರ್ದೇಶನ ಮಾಡಲು ಹೊರಟಿದೆ. ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ಆದರೆ ಇದು ನಿಮಗೂ ಒಳ್ಳೆಯದಲ್ಲ, ರಾಜ್ಯಕ್ಕೆ ಒಳ್ಳೆಯದಲ್ಲ ಎಂದು‌ ತಿಳಿಸಿದರು.

ಗ್ರಾಮ ಪಂಚಾಯತ್​ಗೆ ನಾಮನಿರ್ದೇಶನ ಮಾಡಿದರೆ ಹೋರಾಟ
ಪಕ್ಷಾಂತರ ಕಾಯ್ದೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೊಟ್ಟ ಸಲಹೆಗಳು, ರಾಜ್ಯದಲ್ಲಿ ಆಗುತ್ತಿರುವ ವ್ಯಾಪಕ ಚರ್ಚೆ ಬಗ್ಗೆ ಸಮಿತಿ ರಚನೆ ಆಗಿದೆ. ಅದರ ಬಗ್ಗೆ ಅಭಿಪ್ರಾಯ ಪಡೆಯಲು ಸಭೆ ನಡೆಯಿತು. ಅಧಿಕಾರದಾಸೆಗೆ ಬೇರೆ ಪಕ್ಷಕ್ಕೆ ವಲಸೆ ಹೋಗುವುದು ನಡೆಯಬಾರದು ಎಂದು ತಿಳಿಸಿದ್ದೇವೆ. ನಾವು ಕೂಡ ಪಕ್ಷದ ಹಿರಿಯರ ಸಭೆ ಕರೆಯುತ್ತೇವೆ. ಅವರ ಅಭಿಪ್ರಾಯ ಪಡೆದು 10ನೇ ತಾರೀಖಿನ ಒಳಗೆ ತಿಳಿಸುತ್ತೇವೆ ಎಂದರು.

ABOUT THE AUTHOR

...view details