ಕರ್ನಾಟಕ

karnataka

ETV Bharat / city

ಕೋವಿಡ್ ನಿಯಮ ಪಾಲಿಸುವುದಾಗಿ ಕ್ಷಮಾಪಣಾ ಪತ್ರ ಸಲ್ಲಿಸಿದ ಡಾ.ರಾಜು..‌ - Dr Sagar

ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವೈದ್ಯರಿಗೆ ಆರೋಗ್ಯ ಇಲಾಖೆಯಿಂದ ನೋಟಿಸ್​ ನೀಡಲಾಗಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಡಾ. ರಾಜು ಅವರು, ಕೋವಿಡ್ ನಿಯಮ ಪಾಲಿಸುವುದಾಗಿ ಕ್ಷಮಾಪಣಾ ಪತ್ರ ನೀಡಿದ್ದಾರೆ..

 Dr. Raju, who apologized to  the health dept
Dr. Raju, who apologized to the health dept

By

Published : May 21, 2021, 3:00 PM IST

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಮಾಡುತ್ತಿದ್ದ ಹಿನ್ನೆಲೆ ಮೂಡಲಪಾಳ್ಯದಲ್ಲಿರುವ ಸಾಗರ್ ಕ್ಲಿನಿಕ್‌ನ ಮಾಲೀಕ ಡಾ. ರಾಜುರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದು, ಇದಕ್ಕೆ ವೈದ್ಯರು ಕ್ಷಮೆ ಕೋರಿದ್ದಾರೆ.

ಇದರ ಬೆನ್ನಲ್ಲೇ ಕೆಪಿಎಂಇ ಕಾಯ್ದೆಯಡಿ ಕ್ಲಿನಿಕ್ ಕೂಡ ಮುಚ್ಚುವಂತೆ ಆದೇಶಿಸಲಾಗಿತ್ತು. ಈ ಮಧ್ಯೆ ಸ್ಥಳೀಯ ಜನರು ಕ್ಲಿನಿಕ್ ಕ್ಲೋಸ್‌ಗೆ ವಿರೋಧ ವ್ಯಕ್ತಪಡಿಸಿ ದಾಂಧಲೆ ಸೃಷ್ಟಿಸಿದರು. ಇದಾದ ಬಳಿಕ ಮತ್ತೆ ರಾಜು ಕ್ಲಿನಿಕ್ ರೀ ಓಪನ್ ಆಗಿದ್ದು, ಕೋವಿಡ್ ನಿಯಮ ಪಾಲಿಸುವುದಾಗಿ ಕ್ಷಮಾಪಣಾ ಪತ್ರವನ್ನ ನೀಡಿದ್ದಾರೆ.

ಕೆಪಿಎಂಇ ಲೈಸನ್ಸ್ ಕೂಡ ನವೀಕರಣ ಮಾಡದೇ ಇರುವುದು ಕಂಡ ಬಂದ ಹಿನ್ನೆಲೆ ಇದೀಗ ಅದಕ್ಕೂ ಅರ್ಜಿ ಸಲ್ಲಿಸಿದ್ದಾರೆ. ಕೋವಿಡ್ ನಿಯಮ ಪಾಲಿಸದೇ, ಮತ್ತೆ ಕಡೆಗಣನೆ ಮಾಡಿದರೆ ಲೈಸನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಲಾಗಿದೆ.

ABOUT THE AUTHOR

...view details