ಬೆಂಗಳೂರು: ಗ್ರಾಮೀಣ ಭಾಗದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 47 ತಾಲೂಕುಗಳಲ್ಲಿ ಕಳೆದ ಶನಿವಾರ ಆಯೋಜಿಸಿದ್ದ ವಿದ್ಯುತ್ ಅದಾಲತ್ನಲ್ಲಿ 3,671 ಗ್ರಾಹಕರು ಭಾಗವಹಿಸಿ 1,142 ಮನವಿಗಳನ್ನು ಸಲ್ಲಿಸಿದ್ದಾರೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಹೇಳಿದೆ.
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಂದ ಹಿಡಿದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರವರೆಗೆ ಭಾಗವಹಿಸಿದ್ದ ವಿದ್ಯುತ್ ಅದಾಲತ್ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗ್ರಾಹಕರಿಂದ ಸ್ವೀಕೃತವಾದ ಮನವಿಗಳ ಪೈಕಿ 321 ಮನವಿಗಳಿಗೆ ಬೆಸ್ಕಾಂ ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ಒದಗಿಸಿದ್ದಾರೆ. ಇನ್ನುಳಿದ 821 ಮನವಿಗಳನ್ನು ಮುಂದಿನ ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ರವಾನಿಸಲಾಗಿದೆ.