ಬೆಂಗಳೂರು :ಜೆಡಿಎಸ್ನವರು ಬಿಜೆಪಿಯವರ ಬಾಲಂಗೋಚಿಗಳು ಇದ್ದ ಹಾಗೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು. ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್ ಮಾಜಿ ಎಂಎಲ್ಸಿ ಕಾಂತರಾಜು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನದ ವಿರೋಧಿಗಳು. ರಾಜ್ಯದಲ್ಲಿ ಕೆಟ್ಟ ಸರ್ಕಾರ ನಡೆಸುತ್ತಿದ್ದಾರೆ. ಅವರಿಗೆ ಬಾಲಂಗೋಚಿಗಳಾಗಿ ಜೆಡಿಎಸ್ನವರು ಇದ್ದಾರೆ ಎಂದು ಟೀಕಿಸಿದರು.
ದೇಶವನ್ನು ಮುನ್ನಡೆಸುವ ಶಕ್ತಿ ಇರುವ ಏಕೈಕ ಪಕ್ಷ ಅಂದರೆ ಅದು ಕಾಂಗ್ರೆಸ್. ಕೇಂದ್ರದಲ್ಲಿ ಬಿಜೆಪಿ 8 ವರ್ಷದಿಂದ ಕೇಂದ್ರದಲ್ಲಿ ಆಡಳಿತ ಮಾಡುತ್ತಿದ್ದರೂ ಜನಪರ ಕಾರ್ಯ ಮಾಡಿಲ್ಲ. 40 ವರ್ಷದಿಂದ ನಾನೂ ಸಕ್ರಿಯ ರಾಜಕಾರಣದಲ್ಲಿದ್ದೇನೆ. ಇಷ್ಟೊಂದು ಭ್ರಷ್ಟಾಚಾರ ನಡೆಸುವ ರಾಜ್ಯ ಸರ್ಕಾರವನ್ನು ನಾನು ನೋಡಿಲ್ಲ ಎಂದು ಆರೋಪಿಸಿದರು.
ರಾಜಕೀಯ ನಿವೃತ್ತಿ ಪಡೆಯುವೆ
ಟೆಂಡರ್ ಸಿಗಬೇಕಾದರೆ ಶೇ.40ರಷ್ಟು ಲಂಚ ನೀಡಬೇಕು. ನಾನು ಸಿಎಂ ಆಗಿದ್ದಾಗ ಲಂಚ ತಗೊಂಡಿದ್ದೆ ಎಂದು ಯಾರಾದರೂ ಹೇಳಿದರೆ, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಬಿಜೆಪಿಗೆ, ಜೆಡಿಎಸ್ಗೆ ಸಿದ್ಧಾಂತಗಳೇ ಇಲ್ಲ. ರಾಜಕೀಯ ಸಿದ್ದಾಂತ ಇಲ್ಲದೇ ಇದ್ರೆ ಅದು ರಾಜಕೀಯ ಪಕ್ಷವೇ ಅಲ್ಲ ಎಂದರು.