ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಸಮೀಪದ ಸುಮಾರು 1,800 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲು ಮುಂದಾಗಿರುವ ಕರ್ನಾಟಕ ಪ್ರದೇಶಾಭಿವೃದ್ಧಿ ಕೈಗಾರಿಕಾ ಮಂಡಳಿ (ಕೆಐಎಡಿಬಿ) ವಿರುದ್ಧ ಕಳೆದ 29 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿರುವ ರೈತರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾದರು. ಈ ವೇಳೆ ಯಾವುದೇ ಕಾರಣಕ್ಕೂ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನಾನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಒಮ್ಮೆ ಭೂಮಿಯನ್ನು ಕಳೆದುಕೊಂಡರೆ ಮತ್ತೆ ಗಳಿಸಲು ಸಾಧ್ಯವಿಲ್ಲ. ತಲೆತಲಾಂತರಗಳಿಂದ ಬಾಳಿ ಬದುಕಿದ ಭೂಮಿಯನ್ನು ಕಳೆದುಕೊಳ್ಳುವುದು ಪ್ರತಿಯೊಬ್ಬರಿಗೂ ನೋವಿನ ಸಂಗತಿ. ಹಾಗಾಗಿ ಸರಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಹೇಳಿದರು.