ಬೆಂಗಳೂರು:ಐಟಿ ಇಲಾಖೆ ಅಧಿಕಾರಿಗಳು ದೆಹಲಿಯಲ್ಲಿ ವಶಪಡಿಸಿಕೊಂಡ ಅಕ್ರಮ ಹಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸಮನ್ಸ್ಗೆ ಮಧ್ಯಂತರ ರಕ್ಷಣೆಗೆ ಅವಕಾಶ ನೀಡುವಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಇದರಿಂದ ಡಿಕೆಶಿಗೆ ಮತ್ತಷ್ಟು ಬಂಧನ ಭೀತಿ ಎದುರಾಗಿದೆ.
ನಿನ್ನೆ ನೀಡಿದ ತೀರ್ಪನ್ನು ತಿದ್ದಲು ಸಾಧ್ಯವಿಲ್ಲ. ಅದರಲ್ಲಿರುವ ಕಾಗುಣಿತ ತಪ್ಪುಗಳನ್ನು ತಿದ್ದಬಹುದು. ಯಾವುದೇ ಕಾರಣಕ್ಕೂ ತೀರ್ಪನ್ನು ತಿದ್ದಲಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇಂದು ಡಿಕೆಶಿ ವಿಚಾರಣೆಗೆ ಹಾಜರಾಗದಿದ್ದರೆ, ನಾಳೆ ಇಡಿ ಬಂಧಿಸಲಾಗುತ್ತದೆ ಎನ್ನಲಾಗಿದೆ.
ನಾಳೆ ಮೇಲ್ಮನವಿ ಸಲ್ಲಿಸಲು ಸೂಚಿಸಿದ ಹೈ ಕೋರ್ಟ್, ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ತಿಳಿಸಿದೆ. ಆದರೆ, ಡಿಕೆಶಿ ಪರ ವಕೀಲರು ಅದನ್ನು ನಿರಾಕರಿಸಿದ್ದಾರೆ. ಇದರಿಂದ ನಿರೀಕ್ಷಣಾ ಜಾಮೀನು ಸಿಗಲಿದೆ ಎಂಬ ಭರವಸೆ ಹೊಂದಿದ್ದ ಡಿಕೆಶಿಗೆ ಭಾರೀ ಹಿನ್ನಡೆಯಾಗಿದೆ. ಹೀಗಾಗಿ ಡಿಕೆಶಿ ಆಶಾವಾದ ಭಗ್ನಗೊಂಡಿದೆ.
ಮಧ್ಯಂತರ ರಕ್ಷಣೆ ನೀಡುವಂತೆ ಡಿಕೆಶಿ ಪರ ವಕೀಲರು ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿರುವುದರಿಂದ ಡಿ.ಕೆ.ಶಿವಕುಮಾರ್ ಮತ್ತು ಅವರ ಐವರು ಆಪ್ತರಿಗೆ ಬಂಧನ ಭೀತಿ ಎದುರಾಗಿದೆ.