ಕರ್ನಾಟಕ

karnataka

ETV Bharat / city

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಶಾಸಕ ಜೀವರಾಜ್ ನೇಮಕ

ಜೀವರಾಜ್‌ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಪ್ತರಾಗಿರುವ ಕಾರಣ ಅವರನ್ನೇ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

By

Published : Dec 19, 2020, 8:01 PM IST

Jeevaraj
ಜೀವರಾಜ್

ಬೆಂಗಳೂರು:ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಶಾಸಕ ಡಿ.ಎನ್.ಜೀವರಾಜ್​ರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಜೀವರಾಜ್ ನೇಮಕ ಆದೇಶ

ಬಿಡಿಎ ಅಧ್ಯಕ್ಷ ಸ್ಥಾನ ನೀಡಿದ ಹಿನ್ನೆಲೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಶಾಸಕ ಎಸ್.ಆರ್.ವಿಶ್ವನಾಥ್ ರಾಜೀನಾಮೆ ಕೊಟ್ಟಿದ್ದರು. ಇದೀಗ ಶೃಂಗೇರಿ ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ:ಪಾಲಕರಲ್ಲಿ ಸಚಿವ ಎಸ್.ಟಿ‌ ಸೋಮಶೇಖರ್ ಮಾಡಿದ ಮನವಿ ಏನು?

2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿರುವ ಜೀವರಾಜ್‌ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಪ್ತರಾಗಿರುವ ಕಾರಣ ಮತ್ತೆ ಅಧಿಕಾರ ನೀಡುವ ನಿರ್ಧಾರ ಮಾಡಿದ್ದಾರೆ.

ABOUT THE AUTHOR

...view details