ಕರ್ನಾಟಕ

karnataka

ETV Bharat / city

ಇಂದು ಗುಡ್ಡಾಪುರದ ದಾನಮ್ಮ ದೇವಿ ದೇವಸ್ಥಾನದಲ್ಲಿ ಕರ್ನಾಟಕ ಭವನಕ್ಕೆ ಅಡಿಗಲ್ಲು - ಕರ್ನಾಟಕ ಭವನ

ಇಂದು ಮಹಾರಾಷ್ಟ್ರದ ಗುಡ್ಡಾಪುರದ ದಾನಮ್ಮ ದೇವಿ ದೇವಸ್ಥಾನದಲ್ಲಿ ಕರ್ನಾಟಕ ಭವನಕ್ಕೆ ಅಡಿಗಲ್ಲು ಕಾರ್ಯಕ್ರಮ ನಡೆಯಲಿದೆ.

Foundation stone for Karnataka Bhavan, Foundation stone for Karnataka Bhavan at Maharashtra, Karnataka Bhavan, Karnataka Bhavan news, ಕರ್ನಾಟಕ ಭವನಕ್ಕೆ ಅಡಿಗಲ್ಲು, ಮಹಾರಾಷ್ಟ್ರದಲ್ಲಿ ಕರ್ನಾಟಕ ಭವನಕ್ಕೆ ಅಡಿಗಲ್ಲು, ಕರ್ನಾಟಕ ಭವನ, ಕರ್ನಾಟಕ ಭವನ ಸುದ್ದಿ,
ಕರ್ನಾಟಕ ಭವನಕ್ಕೆ ಅಡಿಗಲ್ಲು

By

Published : Feb 16, 2022, 5:24 AM IST

ಬೆಂಗಳೂರು:ಉತ್ತರ ಕರ್ನಾಟಕ ಭಾಗದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಮಹಾರಾಷ್ಟ್ರದ ದಾನಮ್ಮದೇವಿ ಗುಡ್ಡಾಪುರದಲ್ಲಿ ಕರ್ನಾಟಕ ಸರಕಾರದ ವತಿಯಿಂದ ಕರ್ನಾಟಕ ಭವನ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಇಂದು ಮೊದಲ ಹಂತದ ಕಾಮಗಾರಿಗೆ ಅಡಿಗಲ್ಲು ಕಾರ್ಯಕ್ರಮ ನಡೆಯಲಿದೆ.

ಓದಿ:ಬಂಗಾಳಿ ಗಾನ ಮಾಂತ್ರಿಕ ಸಂಧ್ಯಾ ಮುಖೋಪಾಧ್ಯಾಯ ಇನ್ನಿಲ್ಲ... ಸಿಎಂ ಸಂತಾಪ

ಗುಡ್ಡಾಪುರಕ್ಕೆ ಕರ್ನಾಟಕ ರಾಜ್ಯದಿಂದ ಆಗಮಿಸುವಂತಹ ಭಕ್ತಾದಿಗಳಿಗೆ ಸುಸಜ್ಜಿತ ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈಗಾಗಲೇ ಗುಡ್ಡಾಪುರದಲ್ಲಿ ದೇವಾಲಯದ ಹೆಸರಿನಲ್ಲಿರುವ 2 ಎಕರೆ ಜಮೀನನ್ನು ಖರೀದಿಸಲಾಗಿದೆ. ದೇವಸ್ಥಾನದಿಂದ ಕೇವಲ 300 ಮೀಟರ್‌ ದೂರದಲ್ಲಿ ಜಿಲ್ಲಾ ರಸ್ತೆಗೆ ಹೊಂದಿಕೊಂಡಿರುವ ಈ ಜಮೀನಿಗೆ ಕಾಂಪೌಂಡನ್ನು ನಿರ್ಮಿಸಲಾಗಿತ್ತು.

ಮೊದಲ ಹಂತದಲ್ಲಿ 5 ಕೋಟಿ ರೂಪಾಯಿಗಳ ವೆಚ್ಚದ ನಿರ್ಮಾಣವಾಗಲಿರುವ ಕರ್ನಾಟಕ ಭವನದ ಅಡಿಗಲ್ಲು ಸಮಾರಂಭದಲ್ಲಿ ಸಿಎಂ ಉಪಸ್ಥಿತರಿರಲಿದ್ದಾರೆ.

ABOUT THE AUTHOR

...view details