ಕರ್ನಾಟಕ

karnataka

By

Published : Dec 1, 2019, 4:29 PM IST

ETV Bharat / city

ಕಂಟೈನರ್ ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಗೆ ನಾಲ್ವರು ಬೈಕ್ ಸವಾರರು ಬಲಿ

ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ನಡೆದಿದೆ.

ಮೆಣಸಿಗೇಟ್ ಬಳಿ ಭೀಕರ ರಸ್ತೆ ಅಪಘಾತ
ಮೆಣಸಿಗೇಟ್ ಬಳಿ ಭೀಕರ ರಸ್ತೆ ಅಪಘಾತ

ದೊಡ್ಡಬಳ್ಳಾಪುರ: ಕಂಟೈನರ್​ ಚಾಲಕನ ನಿರ್ಲಕ್ಷ್ಯದ ಚಾಲನೆಗೆ ನಾಲ್ವರು ಬೈಕ್​ ಸವಾರರು ಬಲಿಯಾದ ಘಟನೆ ತಾಲೂಕಿನ ಮೆಣಸಿಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ನಡೆದಿದೆ.

ಮೆಣಸಿಗೇಟ್ ಬಳಿ ಭೀಕರ ರಸ್ತೆ ಅಪಘಾತ

ಕೂಗನಹಳ್ಳಿಯ ಸತೀಶ್ ಮತ್ತು ನಿರ್ಮಲ ಮೃತ ದುರ್ದೈವಿಗಳಾಗಿದ್ದು, ಇನ್ನಿಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ. ವಿಆರ್​ಎಲ್ ಕಂಟೈನರ್ ಲಾರಿ ಅತಿ ವೇಗವಾಗಿ ಬಂದ ಪರಿಣಾಮ ಚಾಲಕನಿಗೆ ನಿಯಂತ್ರಣ ತಪ್ಪಿ, ಎರಡು ಬೈಕ್​ಗಳ ಮೇಲೆ ಲಾರಿ ಹರಿದಿದೆ. ಪರಿಣಾಮ ಲಾರಿ ಚಕ್ರಕ್ಕೆ ಸಿಲುಕಿದ್ದ ಎರಡು ಬೈಕ್​ನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ನಂತರ ಚಾಲಕ ಲಾರಿಯನ್ನ ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.

ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ABOUT THE AUTHOR

...view details