ನೆಲಮಂಗಲ:ತನ್ನ ಹಿರಿಯ ಸಹೋದರಿ ಹಾಗೂ ತನಗೆ ಮದುವೆಯಾಗಿಲ್ಲವೆಂದು ಮನನೊಂದ ಯುವತಿ ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಿದರಕಲ್ಲು ಗ್ರಾಮದಲ್ಲಿ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿ ಚಂದನಾ ( 24) ಆತ್ಮಹತ್ಯೆಗೆ ಶರಣಾದವರು.
ಮದುವೆಯಾಗಿಲ್ಲವೆಂದು ಮನನೊಂದ ಯುವತಿ, ಡೆತ್ ನೋಟ್ ಬರೆದು ಆತ್ಮಹತ್ಯೆ - ಬೆಂಗಳೂರಿನಲ್ಲಿ ಯುವತಿ ಆತ್ಮ ಹತ್ಯೆ
ಮದುವೆಯಾಗಿಲ್ಲವೆಂದು ಮನನೊಂದು ಡೆತ್ ನೋಟ್ ಬರೆದು ಯುವತಿ ನೇಣಿಗೆ ಶರಣಾದ ಘಟನೆ ಚಿಕ್ಕಬಿದರಕಲ್ಲು ಗ್ರಾಮದಲ್ಲಿ ನಡೆದಿದೆ.
![ಮದುವೆಯಾಗಿಲ್ಲವೆಂದು ಮನನೊಂದ ಯುವತಿ, ಡೆತ್ ನೋಟ್ ಬರೆದು ಆತ್ಮಹತ್ಯೆ girl-suisided-in-banglore-chikkabidarakallu](https://etvbharatimages.akamaized.net/etvbharat/prod-images/768-512-14564244-thumbnail-3x2-yyy.jpg)
ಮದುವೆಯಾಗಿಲ್ಲವೆಂದು ಮನನೊಂದ ಯುವತಿ, ಡೆತ್ ನೋಟ್ ಬರೆದು ಆತ್ಮಹತ್ಯೆ
ಚಂದನಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಗಿ ಹೇಳಲಾಗಿದೆ. 'ನನ್ನ ಸಾವಿಗೆ ಯಾರೂ ಕಾರಣರಲ್ಲ' ಎಂದು ಡೆತ್ನೋಟ್ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಉಕ್ರೇನ್ನಲ್ಲಿ ಕರ್ನಾಟಕದ 281 ಎಂಬಿಬಿಎಸ್ ವಿದ್ಯಾರ್ಥಿಗಳು: ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ರವಾನೆ