ಕರ್ನಾಟಕ

karnataka

ETV Bharat / city

ಅನುದಾನಕ್ಕಾಗಿ ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಲಿ: ಎಸ್.​​ಆರ್. ಪಾಟೀಲ - ಅನುದಾನ ಕುರಿತು ಎಸ್​​ಆರ್​​ ಪಾಟೀಲ್​​ ಹೇಳಿಕೆ

ರಾಜ್ಯದ 25 ಬಿಜೆಪಿ ಸಂಸದರು ಪ್ರಧಾನಿ ಬಳಿ ಹೋಗಿ ರಾಜ್ಯಕ್ಕೆ ಹೆಚ್ಚಿನ ನೆರವು ಕೊಡಿಸುವ ಧೈರ್ಯ ಮಾಡಲಿ. ನಿಮ್ಮನ್ನು ಆರಿಸಿ ಕಳುಹಿಸಿರುವ ಜನರಿಗಾಗಿ ಒಂದು ಸಾರಿಯಾದರೂ ಪ್ರಧಾನಿ ಮುಂದೆ ಧ್ವನಿ ಎತ್ತಿ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಹೇಳಿದ್ದಾರೆ.

government-should-force-on-central-government-for-grants
ಎಸ್ ಆರ್ ಪಾಟೀಲ್

By

Published : Aug 27, 2020, 10:49 PM IST

ಬೆಂಗಳೂರು: ರಾಜ್ಯಕ್ಕೆ ಕೇಂದ್ರದಿಂದ ನಿರೀಕ್ಷಿತ ಅನುದಾನ ಲಭಿಸುತ್ತಿಲ್ಲ. ರಾಜ್ಯ ಬಿಜೆಪಿ ಈ ವಿಚಾರವಾಗಿ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಳೆದ ವರ್ಷದ ಪ್ರವಾಹದಿಂದ ನಲುಗಿರುವ ಉತ್ತರ ಕರ್ನಾಟಕದ ಜನರಿಗೂ ಇನ್ನೂ ಸೂಕ್ತ ಪರಿಹಾರ ದೊರೆತಿಲ್ಲ. ಮನೆ ಕಳೆದುಕೊಂಡ ಜನರು ಇನ್ನೂ ಶೆಡ್​ಗಳಲ್ಲಿ ವಾಸ ಮಾಡುತ್ತಿದ್ದಾರೆ. ಅವರಿಗೆ ಸೂರು ಕಲ್ಪಿಸಲು ಕೇಂದ್ರದಿಂದ ಹೆಚ್ಚಿನ ಅನುದಾನಕ್ಕೆ ಪ್ರಧಾನಿ ಮುಂದೆ ಬಿಜೆಪಿ ಸಂಸದರೆ ಧ್ವನಿ ಎತ್ತಿ ಎಂದು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದ 25 ಬಿಜೆಪಿ ಸಂಸದರು ಪ್ರಧಾನಿ ಬಳಿ ಹೋಗಿ ರಾಜ್ಯಕ್ಕೆ ಹೆಚ್ಚಿನ ನೆರವು ಕೊಡಿಸುವ ಧೈರ್ಯ ಮಾಡಲಿ. ನಿಮ್ಮನ್ನು ಆರಿಸಿ ಕಳುಹಿಸಿರುವ ಜನರಿಗಾಗಿ ಒಂದು ಸಾರಿಯಾದರೂ ಪ್ರಧಾನಿ ಮುಂದೆ ಧ್ವನಿಎತ್ತಿ ಎಂದು ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೆ ಪಕ್ಷದ ಸರ್ಕಾರ ಇದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗುತ್ತದೆ ಎಂದು ಭಾಷಣ ಮಾಡಿದ್ದೀರಿ. ಈಗ ಎರಡೂ ಕಡೆ ನಿಮ್ಮದೇ ಸರ್ಕಾರವಿದೆ. ರಾಜ್ಯದ ಕಷ್ಟಕ್ಕೆ ಸ್ಪಂದಿಸಲು ಪ್ರಧಾನಿ ಮುಂದೆ ಬಿಜೆಪಿ ಸಂಸದರೆ ಧ್ವನಿ ಎತ್ತಿ ಎಂದು ವಿವರಿಸಿದ್ದಾರೆ.

ABOUT THE AUTHOR

...view details