ಕರ್ನಾಟಕ

karnataka

ETV Bharat / city

ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆ - ಹೆಚ್​ಡಿಡಿ, ಹೆಚ್​ಡಿಕೆ ನಮನ.. - ಶಿವಕುಮಾರ ಸ್ವಾಮಿಗೆ ದೇವೇಗೌಡ ನಮನ

ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆ ಹಿನ್ನೆಲೆ, ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಮನ ಸಲ್ಲಿಸಿದ್ದಾರೆ.

hd dewegowda - hd kumaraswamy
ಹೆಚ್.ಡಿ. ದೇವೇಗೌಡ - ಹೆಚ್.ಡಿ. ಕುಮಾರಸ್ವಾಮಿ

By

Published : Jan 21, 2022, 12:25 PM IST

ಬೆಂಗಳೂರು: ತ್ರಿವಿಧ ದಾಸೋಹಿ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆ ಹಿನ್ನೆಲೆ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಮನ ಸಲ್ಲಿಸಿದ್ದಾರೆ.

ಭಕ್ತರ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಲಿಂಗೈಕ್ಯ ಪರಮಪೂಜ್ಯ ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿಗಳ ಪುಣ್ಯಸ್ಮರಣೆಯಂದು ನನ್ನ ಭಕ್ತಿಪೂರ್ವಕ ನಮನಗಳು. ಶ್ರೀಗಳನ್ನು ಸ್ಮರಿಸುತ್ತಾ ಅವರು ಹಾಕಿಕೊಟ್ಟ ಸನ್ನಡತೆಯ ದಾರಿಯಲ್ಲಿ ಸಾಮರಸ್ಯದಿಂದ ಬಾಳಿ ಅವರ ಅನುಗ್ರಹಕ್ಕೆ ಭಾಜನರಾಗೋಣ ಎಂದು ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ನೈಟ್ ಕರ್ಫ್ಯೂ ಬಿಟ್ಟು ಉಳಿದೆಲ್ಲ ನಿರ್ಬಂಧಗಳನ್ನು ತೆರವುಗೊಳಿಸುವ ಸಾಧ್ಯತೆ?

ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, ಅನ್ನ, ಆಶ್ರಯ, ಅಕ್ಷರದ ಮೂಲಕ ಕರ್ನಾಟಕದ ಕಲ್ಪವೃಕ್ಷವಾಗಿದ್ದ, ಜ್ಞಾನದಿವ್ಯತೆಯ ಸಾಕ್ಷಾತ್ಕಾರವಾಗಿದ್ದ ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿಗಳ ಪುಣ್ಯಸ್ಮರಣೆಯ ʼದಾಸೋಹ ದಿನʼವು ಹಸಿವುಮುಕ್ತ, ನಿರಾಶ್ರಯಮುಕ್ತ, ಅಜ್ಞಾನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಲಿ ಎಂದಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details