ಕರ್ನಾಟಕ

karnataka

ವಿದ್ಯುತ್ ದರ ಏರಿಕೆ ನಿರ್ಧಾರ ಕೈಬಿಡಲು ಹೆಚ್​​​​​ಡಿಕೆ ಒತ್ತಾಯ

By

Published : Nov 5, 2020, 3:00 PM IST

ವಿದ್ಯುತ್​​ ದರ ಏರಿಸುವ ಕುರಿತು ಕೈಗೊಂಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ.

HD Kumarswamy
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು:ಕೊರೊನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ಪ್ರತಿ ಯೂನಿಟ್ 20 ಪೈಸೆಯಿಂದ 50 ಪೈಸೆವರೆಗೆ, ಸರಾಸರಿ 40 ಪೈಸೆ ಹೆಚ್ಚಿಸಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ABOUT THE AUTHOR

...view details