ಕರ್ನಾಟಕ

karnataka

By

Published : Dec 13, 2021, 4:54 PM IST

ETV Bharat / city

ವಿಧಾನಪರಿಷತ್ ಚುನಾವಣೆ: ಫಲಿತಾಂಶಕ್ಕೆ ನೀಡಿದ್ದ ತಡೆ ತೆರವು ಮಾಡಿದ ಹೈಕೋರ್ಟ್

ವಿಧಾನ ಪರಿಷತ್ತಿನ ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಕೋರ್ಟ್​ ಅನುಮತಿ ಇಲ್ಲದೇ ಪ್ರಕಟಿಸುವಂತಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ತೆರವು ಮಾಡಿರುವ ಹೈಕೋರ್ಟ್ ವಿಭಾಗೀಯ ಪೀಠ, ಫಲಿತಾಂಶ ಪ್ರಕಟಿಸುವುದಕ್ಕೆ ಸಮ್ಮತಿಸಿದೆ.

high court
ಹೈಕೋರ್ಟ್

ಬೆಂಗಳೂರು:ವಿಧಾನ ಪರಿಷತ್ತಿನ ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಕೋರ್ಟ್​ ಅನುಮತಿ ಇಲ್ಲದೇ ಪ್ರಕಟಿಸುವಂತಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ತೆರವು ಮಾಡಿರುವ ಹೈಕೋರ್ಟ್ ವಿಭಾಗೀಯ ಪೀಠ, ಫಲಿತಾಂಶ ಪ್ರಕಟಿಸುವುದಕ್ಕೆ ಸಮ್ಮತಿಸಿದೆ.

ಇದೇ ವೇಳೆ, ಚುನಾವಣಾ ಫಲಿತಾಂಶ ಕುರಿತು ಸಲ್ಲಿಸಿರುವ ಅರ್ಜಿಯು ಅಂತಿಮ ತೀರ್ಪಿಗೆ ಒಳಪಟ್ಟಿರಲಿದೆ ಎಂದು ಸ್ಪಷ್ಟಪಡಿಸಿದೆ. ಹೈಕೋರ್ಟ್​ನ ಈ ತೀರ್ಪಿನಿಂದಾಗಿ ಬೆಂಗಳೂರು ಕ್ಷೇತ್ರದ ಚುನಾವಣೆಗಿದ್ದ ಅಡ್ಡಿ ನಿವಾರಣೆಯಾದಂತಾಗಿದೆ.

ಪ್ರಕರಣವೇನು?

ಆನೇಕಲ್, ಅತ್ತಿಬೆಲೆ ಹಾಗೂ ಮಹದೇವಪುರ ಪುರಸಭೆಗಳ ನಾಮನಿರ್ದೇಶತ ಸದಸ್ಯರನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ನಾಮ ನಿರ್ದೇಶಿತ ಸದಸ್ಯರು ಚುನಾವಣೆಯಲ್ಲಿ ಮತದಾನ ಮಾಡಬಹುದು. ಆದರೆ, ಅವರ ಮತಗಳನ್ನು ಪ್ರತ್ಯೇಕವಾಗಿರಿಸಬೇಕು. ಜೊತೆಗೆ ಚುನಾವಣಾ ಫಲಿತಾಂಶವನ್ನು ನ್ಯಾಯಾಲಯದ ಅನುಮತಿ ಇಲ್ಲದೇ ಪ್ರಕಟಿಸಬಾರದು ಎಂದು ಮಧ್ಯಂತರ ಆದೇಶ ಮಾಡಿತ್ತು.

ಈ ಆದೇಶವನ್ನು ಪ್ರಶ್ನಿಸಿ ಕೇಂದ್ರ ಚುನಾವಣಾ ಆಯೋಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರಿದ್ದ ವಿಭಾಗೀಯ ಪೀಠ, ಸಂವಿಧಾನದ ವಿಧಿ 243 (ಆರ್) (2) ನಿಯಮಗಳು ನಾಮನಿರ್ದೇಶಿತ ಸದಸ್ಯರಿಗೆ ಪುರಸಭೆಯ ಸಭೆಯಲ್ಲಿ ಮತದಾನದ ಹಕ್ಕು ಮೊಕಟುಗೊಳಿಸಿದೆಯೇ ಹೊರತು ಇತರೆ ಚುನಾವಣೆಗಳಲ್ಲಿ ಅಲ್ಲ.

ಇದನ್ನೂ ಓದಿ: ವಿಧಾನಪರಿಷತ್ ಚುನಾವಣೆ.. ಬಿಜೆಪಿ 15 ಸ್ಥಾನ ಗೆಲ್ಲಲಿದೆ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಹೀಗಾಗಿ, ನಾಮನಿರ್ದೇಶಿತರ ಸದಸ್ಯರು ಮತದಾನ ಮಾಡುವುದಕ್ಕೆ ನಿರ್ಬಂಧ ಕೋರಿ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿ ಹೈಕೋರ್ಟ್​ ಏಕಸದಸ್ಯ ಪೀಠ ನೀಡಿರುವ ಮಧ್ಯಂತರ ಆದೇಶ ಸೂಕ್ತವಲ್ಲ ಎಂದು ಆದೇಶವನ್ನು ತೆರವು ಮಾಡಿದೆ. ಇದೇ ವೇಳೆ, ಅರ್ಜಿ ಸಂಬಂಧ ಏಕಸದಸ್ಯ ಪೀಠ ನೀಡಲಿರುವ ತೀರ್ಪಿಗೆ ಚುನಾವಣಾ ಫಲಿತಾಂಶ ಒಳಪಟ್ಟಿರಲಿದೆ ಎಂದು ಸ್ಪಷ್ಟಪಡಿಸಿ ಅರ್ಜಿ ಇತ್ಯರ್ಥಪಡಿಸಿತು.

ABOUT THE AUTHOR

...view details