ಕರ್ನಾಟಕ

karnataka

ETV Bharat / city

ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆ ಆರೋಪ; ಹಂಸಲೇಖ ವಿರುದ್ಧ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ದಿ.ಪೇಜಾವರ ಶ್ರೀಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಲ್ಲಿ ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್‌ ತಡೆ ನೀಡಿ ಪ್ರತಿವಾದಿಗಳಿಗೆ ಹೈಕೋರ್ಟ್​ ನೋಟಿಸ್ ನೀಡಿದೆ.

By

Published : Nov 30, 2021, 1:36 PM IST

High court stay case against Hamsalekha statement on Pejavara shree
ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆ ಆರೋಪ; ಹಂಸಲೇಖರ ವಿರುದ್ಧ ಕೇಸ್‌ಗೆ ಹೈಕೋರ್ಟ್‌ ತಡೆ

ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪ ಸಂಬಂಧ ಬಸವನಗುಡಿ ಠಾಣೆಯಲ್ಲಿ ನಾದಬ್ರಹ್ಮ ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್‌ ತಡೆ ನೀಡಿದೆ.

ಬಸವನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಸಂಬಂಧ ಗಂಗರಾಜು ಹಂಸಲೇಖ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿ ಪ್ರಕರಣ ರದ್ದು ಮಾಡುವಂತೆ ಮನವಿ ಮಾಡಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ಡಾ. ಮುರಳೀಧರ್ ದೂರಿನಡಿ ದಾಖಲಾಗಿದ್ದ ಪ್ರಕರಣಕ್ಕೆ ತಡೆ ನೀಡಿದೆ.

ಮತ್ತೊಬ್ಬ ಅರ್ಜಿದಾರ ಎಸ್.ಎನ್. ಅರವಿಂದ ದೂರಿನ ಸಂಬಂಧ ಹಾಗೂ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ. ವಕೀಲ ಕಾಶಿನಾಥ್‌, ಸಿ ಎಸ್‌ ದ್ವಾರಕನಾಥ್‌ ಹಂಸಲೇಖ ಅವರ ಪರ ವಾದ ಮಂಡಿಸಿದ್ರು.

ಇದನ್ನೂ ಓದಿ:ಪೇಜಾವರ ಶ್ರೀಗಳ ವಿರುದ್ಧ ಅವಹೇಳಕಾರಿ ವಿಚಾರ: ವಿಚಾರಣೆಗೆ ಆಗಮಿಸಿದ ಹಂಸಲೇಖ, ಸ್ಥಳದಲ್ಲಿ ಗದ್ದಲ

For All Latest Updates

TAGGED:

ABOUT THE AUTHOR

...view details