ಹೊಸಕೋಟೆ: ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣದ ಎಂವಿಜೆ ಆಸ್ಪತ್ರೆಯಲ್ಲಿ ನಡೆದಿದೆ.
ಕಳೆದ ಭಾನುವಾರ ನಗರದ ಎಂವಿಜೆ ಕೋವಿಡ್ ಸೆಂಟರ್ಗೆ ದಾಖಲಾಗಿದ್ದ ಬಿಬಿಎಂಪಿ ಸೋಂಕಿತ ಸಿಬ್ಬಂದಿ, ಬುಧವಾರ ರಾತ್ರಿ ಆಸ್ಪತ್ರೆಯ ಸಿಬ್ಬಂದಿಯ ಜೊತೆ ಮನೆಗೆ ಹೋಗಲು ಬಿಡುವಂತೆ ಜಗಳ ಮಾಡಿಕೊಂಡಿದ್ದ. ನಂತರ ಏಕಾಏಕಿ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾನೆ.
ಮೂಲತಃ ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದವನಾಗಿರುವ ಸೋಂಕಿತ ಬೆಂಗಳೂರಲ್ಲಿ ವಾಸವಿದ್ದನಂತೆ. ಪಾಸಿಟಿವ್ ಬಂದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ಎಂವಿಜೆ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದರು. ಇದೀಗ ಆತ ಎಲ್ಲರಿಗೂ ಚೆಳ್ಳೇಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.