ಕರ್ನಾಟಕ

karnataka

By

Published : Dec 8, 2021, 10:37 AM IST

ETV Bharat / city

ಸಂಚಾರಿ ಪೊಲೀಸ್ ಆಯುಕ್ತರ ಮನೆಯಲ್ಲಿ ಕಳ್ಳತನ: ಮನೆಕೆಲಸದಾಕೆ ಪೊಲೀಸ್ ವಶ

ಬೆಂಗಳೂರು ನಗರದ ಜಂಟಿ ಪೊಲೀಸ್ ಆಯುಕ್ತ (ಟ್ರಾಫಿಕ್​) ಡಾ.ಬಿ.ಆರ್.ರವಿಕಾಂತೇಗೌಡ ಮನೆಯಲ್ಲಿ ಕಳ್ಳತನವಾಗಿರುವ ಪ್ರಕರಣದ ಕುರಿತು ದೂರು ದಾಖಲಾಗಿದ್ದು, ಪೊಲೀಸರು ಮನೆಕೆಲಸದಾಕೆಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ರವಿಕಾಂತೇಗೌಡ  , ravikanthe gowda
ರವಿಕಾಂತೇಗೌಡ

ಬೆಂಗಳೂರು: ನಗರ ಜಂಟಿ ಟ್ರಾಫಿಕ್ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್​ನಗರ ಪೊಲೀಸರು ಮನೆಕೆಲಸದಾಕೆಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಸಂಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಮೊಬೈಲ್ ಸೇರಿದಂತೆ ಇನ್ನಿತರೆ ವಸ್ತುಗಳು ಕಳವಾಗಿವೆ.‌ ಇದಕ್ಕೆ ಮನೆಕೆಲಸದಾಕೆ ಕಾರಣ ಎಂದು ಆರೋಪಿಸಿ ರವಿಕಾಂತೇಗೌಡ ಮನೆಯ ಕಾರು ಚಾಲಕ ಜಗದೀಶ್ ನೀಡಿದ ದೂರಿನ ಮೇರೆಗೆ ಅಂಕಿತಾ ಎಂಬುವರನ್ನು ಪೊಲೀಸರು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಟ್ರಾಫಿಕ್ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮನೆಯಲ್ಲಿ ಕಳ್ಳತನ

ಕಳೆದೆರಡು ವರ್ಷಗಳಿಂದ ಕಮಿಷನರ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಂಕಿತಾ, ಮೂಲತಃ ಹಾವೇರಿಯವರಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ABOUT THE AUTHOR

...view details