ಬೆಂಗಳೂರು: ನಗರ ಜಂಟಿ ಟ್ರಾಫಿಕ್ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ನಗರ ಪೊಲೀಸರು ಮನೆಕೆಲಸದಾಕೆಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಸಂಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಮೊಬೈಲ್ ಸೇರಿದಂತೆ ಇನ್ನಿತರೆ ವಸ್ತುಗಳು ಕಳವಾಗಿವೆ. ಇದಕ್ಕೆ ಮನೆಕೆಲಸದಾಕೆ ಕಾರಣ ಎಂದು ಆರೋಪಿಸಿ ರವಿಕಾಂತೇಗೌಡ ಮನೆಯ ಕಾರು ಚಾಲಕ ಜಗದೀಶ್ ನೀಡಿದ ದೂರಿನ ಮೇರೆಗೆ ಅಂಕಿತಾ ಎಂಬುವರನ್ನು ಪೊಲೀಸರು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.